ಆ್ಯಪ್ನಗರ

ಬೆಂಗಳೂರು ಲಾಕ್‌ಡೌನ್‌ಗೆ ಕ್ಯಾರೆ ಎನ್ನದ ಜನರು ! ಕೆ.ಆರ್‌ ಮಾರ್ಕೆಟ್‌ನಲ್ಲಿ ಜನಜಂಗುಳಿ

ಕೊರೊನಾ ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಆದರೆ ಬೆಂಗಳೂರಿನಲ್ಲಿ ಸರ್ಕಾರದ ಆದೇಶಕ್ಕೆ ಜನರು ಕ್ಯಾರೆ ಎನ್ನುತ್ತಿಲ್ಲ.

Vijaya Karnataka Web 23 Mar 2020, 7:04 pm
ಬೆಂಗಳೂರು: ಕೊರೊನಾ ಹರಡದಂತೆ ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಿ ಸರ್ಕಾರ ಆದೇಶಿಸಿದೆ. ಆದರೆ ಸರ್ಕಾರದ ಆದೇಶವನ್ನು ಜನರು ಮಾತ್ರ ಪಾಲನೆ ಮಾಡುತ್ತಿಲ್ಲ. ಅಗತ್ಯ ಸಾಮಾಗ್ರಿಗಳನ್ನು ಖರೀದಿ ಮಾಡಲು ಬೆಂಗಳೂರಿನ ಕೆ.ಆರ್ ಪೇಟೆಯಲ್ಲಿ ಜನರು ಮುಗಿಬಿದ್ದ ದೃಶ್ಯಗಳು ಕಂಡುಬಂದವು.
Vijaya Karnataka Web kr market



ಕೆ.ಆರ್‌ ಮಾರ್ಕೆಟ್‌ನಲ್ಲಿ ಎಂದಿನಂತೆ ಜನಜಂಗುಳಿ ಇದೆ. ಹೂವು, ಹಣ್ಣು, ತರಕಾರಿಗಳನ್ನು ಖರೀದಿ ಮಾಡಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ದೂರದಿಂದ ಬಂದ ಜನರು ಬಸ್‌ಗಾಗಿ ಕಾದು ನಿಂತಿರುವ ದೃಶ್ಯಗಳು ಕಂಡುಬಂದವು.

ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ವೇತನ ಸಹಿತ ರಜೆ ಘೋಷಣೆ

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರ ಒಂದು ದಿನ ಜನತಾ ಕರ್ಫ್ಯೂ ಜಾರಿಯಲ್ಲಿತ್ತು. ಇದರ ಮುಂದುವರಿದ ಭಾಗವಾಗಿ ಕೆಲವೊಂದು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿದೆ.

ಜನರು ಅಗತ್ಯವಿದ್ದರೆ ಮಾತ್ರ ಹೊರಗಡೆ ಬರುವಂತೆ ಸೂಚಿಸಿದೆ. ಹೀಗಿದ್ದರೂ ಕೊರೊನಾ ಭೀತಿ ಜನರಲ್ಲಿ ಕಾಣಿಸುತ್ತಿಲ್ಲ. ಸರ್ಕಾರ ಹಾಗೂ ಆರೋಗ್ಯ ಇಲಾಖೆ ನೀಡಿರುವ ನಿರ್ದೇಶನಗಳನ್ನು ಜನರು ಪಾಲನೆ ಮಾಡುತ್ತಿಲ್ಲ.

ಮೈಸೂರಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢ, ಜಿಲ್ಲಾಧಿಕಾರಿ ಸ್ಪಷ್ಟನೆ

ಬೆಂಗಳೂರಿನ ಹಲವು ಕಡೆಗಳಲ್ಲಿ ಜನರು ಸೋಮವಾರ ಅಗತ್ಯ ಸಾಮಾಗ್ರಿಗಳನ್ನು ಖರೀದಿ ಮಾಡಲು ಅಂಗಡಿಗಳಿಗೆ ಬರುತ್ತಿದ್ದಾರೆ. ಹೋಟೆಲ್‌ಗಳಲ್ಲಿ ಪಾರ್ಸೆಲ್‌ ನೀಡಲು ಮಾತ್ರ ಅವಕಾಶವಿದ್ದು, ದಿನಸಿ ಅಂಗಡಿಗಳನ್ನು ತೆರೆದಿಡಲು ಸರ್ಕಾರ ಅವಕಾಶ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕ ಮೂಡಿಸಿದೆ. ಮಾರ್ಚ್‌ 23 ರ ತನಕ ರಾಜ್ಯದಲ್ಲಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ