ಆ್ಯಪ್ನಗರ

ಡ್ರೋನ್‌ ಕುಖ್ಯಾತಿಯ ಪ್ರತಾಪ್‌ನನ್ನು ಮೈಸೂರಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ದ ಡ್ರೋನ್‌ ಕುಖ್ಯಾತಿಯ ಪ್ರತಾಪ್‌ ನನ್ನು ಮೈಸೂರಿನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಾಪ್‌ ಮೈಸೂರಿನಲ್ಲಿದ್ದಾನೆಂಬ ಮಾಹಿತಿ ಪಡೆದ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರೆ.

Vijaya Karnataka Web 20 Jul 2020, 6:04 pm
ಬೆಂಗಳೂರು: ಕ್ವಾರಂಟೈನ್‌ ನಿಯಮ ಉಲ್ಲಂಘನೆ ಮಾಡಿ ಮನೆಯಿಂದ ಹೊರಬಂದಿದ್ದ ಡ್ರೋನ್‌ ಕುಖ್ಯಾತಿಯ ಪ್ರತಾಪ್‌ ನನ್ನು ಮೈಸೂರಿನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಾಪ್‌ ಮೈಸೂರಿನಲ್ಲಿದ್ದಾನೆಂಬ ಮಾಹಿತಿ ಪಡೆದ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರೆ.
Vijaya Karnataka Web drone prathap


ಹೊರ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಪ್ರತಾಪ್‌ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಅಂಜನಾಪುರದ ಎಸ್.ಎಫ್-ಎಂ.ಐ.ಎಂ.ಜಿ ವಿಂಡ್ ಪಾಲ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ. ಇಲ್ಲೇ ಕ್ವಾರಂಟೈನ್‌ ನಲ್ಲಿರುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು.

ಕೈಗೆ ಸೀಲ್‌ ಕೂಡಾ ಹಾಕಿದ್ದರು. ಆದರೆ, ಪ್ರತಾಪ್‌ ಪ್ಲಾಟ್‌ ನಿಂದ ಹೊರಬಂದು ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ. ನಂತರ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಪ್ರತಾಪ್‌ ನನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

'ಕೋವಿಡ್‌ ಕವಚ್' ಆರೋಗ್ಯ ವಿಮೆಗೆ ಪಾವತಿಸಬೇಕಾದ ಪ್ರಿಮಿಯಂ ಎಷ್ಟು? ಇಲ್ಲಿದೆ ಪೂರ್ಣ ವಿವರ

ಸುದ್ದಿವಾಹಿನಿಗಳ ಸಂದರ್ಶನಕ್ಕೆ ಡ್ರೋಣ್ ಪ್ರತಾಪ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದರು. ಹೀಗಾಗಿ ಬಂಧನ ಭೀತಿಯಿಂದಾಗಿ ಪೋಲಿಸರು ಮತ್ತು ಕ್ವಾರಂಟೈನ್ ಸಿಬ್ಬಂದಿಯಿಂದ ಕೈ ಸಿಗದೆ ತಲೆ ಮರೆಸಿಕೊಂಡಿದ್ದರು.

ಮೂಲಗಳ ಪ್ರಕಾರ ಪ್ರತಾಪ್ ಎರಡು ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಒಂದು ಆತ ಮನೆಯಿಂದ ಹೊರ ಬಂದು ಟಿವಿ ವಾಹಿನಿಗಳಿಗೆ ಸಂದರ್ಶನ ಕೊಟ್ಟಿದ್ದು .

ಇನ್ನೊಂದು ಆತ ಸ್ಥಳೀಯ ಆಡಳಿತಕ್ಕೆ ಗೊತ್ತಾಗಿದೆ ಎಂದು ತಿಳಿಯುತ್ತಲೇ ಆತ ತನ್ನ ಫೋನ್ ನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ.ಇದೂ ಕೂಡ ಕ್ವಾರಂಟೈನ್ ನಿಯಮ ಉಲ್ಲಂಘನೆ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ