ಆ್ಯಪ್ನಗರ

ಬೆಂಗಳೂರಲ್ಲಿ ಬಾಡಿಗೆ ಕಾರು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಕಾರುಗಳನ್ನು ಬಾಡಿಗೆಗೆ ಪಡೆದು ಇತರರಿಗೆ ಮಾರಾಟ ಮಾಡುವ ಮೂಲಕ ಕಾರು ಬಾಡಿಗೆ ಸಂಸ್ಥೆಯನ್ನು ವಂಚಿಸುತ್ತಿದ್ದ ಇಬ್ಬರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 18 Jan 2021, 10:17 pm
ಬೆಂಗಳೂರು: ಕಾರುಗಳನ್ನು ಬಾಡಿಗೆಗೆ ಪಡೆದು ಇತರರಿಗೆ ಮಾರಾಟ ಮಾಡುವ ಮೂಲಕ ಕಾರು ಬಾಡಿಗೆ ಸಂಸ್ಥೆಯನ್ನು ವಂಚಿಸುತ್ತಿದ್ದ ಇಬ್ಬರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
Vijaya Karnataka Web Zooming ahead


ಮೋಹನ್‌ ಮತ್ತು ಗಿರೀಶ್‌ ಬಂಧಿತರು. ಆರೋಪಿಗಳಿಂದ 27 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಇಬ್ಬರ ವಿರುದ್ಧ ಕಾರು ಬಾಡಿಗೆ ಸಂಸ್ಥೆಯ ವ್ಯವಸ್ಥಾಪಕರು ಡಿಸೆಂಬರ್‌ 30ರಂದು ಬೈಯ್ಯಪ್ಪನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. 2020ರ ಜುಲೈನಲ್ಲಿ ಗಿರೀಶ್‌ಗೌಡ ಮತ್ತು ಮೋಹನ್‌ ತಮ್ಮ ಕಚೇರಿಗೆ ಭೇಟಿ ನೀಡಿ ಬಾಡಿಗೆಗೆ ಕಾರನ್ನು ತೆಗೆದುಕೊಂಡಿದ್ದರು.

ಜಮೀನು ಖಾತೆಗೆ ₹11 ಲಕ್ಷ ಲಂಚ ಪಡೆದ ರಾಜಸ್ವ ನಿರೀಕ್ಷಕ, ಹೆಡ್‌ ಕಾನ್ಸ್‌ಟೆಬಲ್‌ ಎಸಿಬಿ ಬಲೆಗೆ

ಹಿಂದೆ ಹಲವಾರು ಸಂದರ್ಭಗಳಲ್ಲಿ ಅವರು 20 ಕಾರುಗಳನ್ನು ಬಾಡಿಗೆ ಪಡೆದುಕೊಂಡಿದ್ದರು. ಈ ಕಾರುಗಳನ್ನು ಅವರು ಹಿಂತಿರುಗಿಸಲಿಲ್ಲ. ಹೀಗಾಗಿ ಅನುಮಾನ ಬಂದು ಮೋಹನ್‌ ಮತ್ತು ಗಿರೀಶ್‌ ಇಬ್ಬರ ಬಗ್ಗೆ ವಿಚಾರಿಸಿದಾಗ ಅವರು ವಾಹನಗಳನ್ನು ಬೇರೆಯವರಿಗೆ ಮಾರಾಟ ಮಾಡಿರುವ ಸಂಗತಿ ಬಯಲಿಗೆ ಬಂದಿತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಮಾಹಿತಿ ಆಧಾರದ ಮೇಲೆ 27 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ನಗದು ಮತ್ತು ಚಿನ್ನಾಭರಣ ಸೇರಿದಂತೆ ಇನ್ನಿತರೆ ಬೆಲೆ ಬಾಳುವ ವಸ್ತುಗಳನ್ನು ಕೂಡ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ