ಆ್ಯಪ್ನಗರ

ಸರಗಳ್ಳನ ಹಿಡಿದ ಪೊಲೀಸ್ ಪೇದೆಗೆ ಹನಿಮೂನ್ ಪ್ಯಾಕೇಜ್‌ ಗಿಫ್ಟ್

ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳರ ಪೈಕಿ ಓರ್ವನನ್ನು ಬೆನ್ನಟ್ಟಿ ಹಿಡಿದ ಪೊಲೀಸ್ ಪೇದೆ ವೆಂಕಟೇಶ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಹನಿಮೂನ್ ಪ್ಯಾಕೇಜ್ ಉಡುಗೊರೆ ನೀಡಿದ್ದಾರೆ.

Vijaya Karnataka Web 7 Jul 2018, 12:20 pm
ಬೆಂಗಳೂರು: ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳರ ಪೈಕಿ ಓರ್ವನನ್ನು ಬೆನ್ನಟ್ಟಿ ಹಿಡಿದ ಪೊಲೀಸ್ ಪೇದೆ ವೆಂಕಟೇಶ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಹನಿಮೂನ್ ಪ್ಯಾಕೇಜ್ ಉಡುಗೊರೆ ನೀಡಿದ್ದಾರೆ. ಗುರುವಾರ ಮಧ್ಯಾಹ್ನ ಬೆಳ್ಳಂದೂರು ಪೊಲೀಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನ ಮೊಬೈಲ್ ಕಸಿದುಕೊಂಡು ಇಬ್ಬರು ಪರಾರಿಯಾಗುತ್ತಿದ್ದರು.
Vijaya Karnataka Web Police crime


ಈ ಸಂದರ್ಭದಲ್ಲಿ ಆತ ಕಳ್ಳ ಕಳ್ಳ ಎಂದು ಕೂಗಿಕೊಂಡಿದ್ದ. ಸ್ಥಳದಲ್ಲಿದ್ದ ಬೆಳ್ಳಂದೂರು ಪೊಲೀಸ್ ಠಾಣೆಯ ಪೇದೆ ವೆಂಕಟೇಶ್ ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರನ್ನು ಬೆನ್ನಟ್ಟಿ, ಓರ್ವನನ್ನು ಹಿಡಿಯುವಲ್ಲಿ ಸಫಲರಾಗಿದ್ದರು. ಅರುಣ್ ಅಲಿಯಾಸ್ ದಯಾಳ್ ಬಂಧಿತ ಆರೋಪಿಯಾಗಿದ್ದು, ಬೆಳ್ಳಂದೂರು ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ.


ಪೇದೆ ವೆಂಕಟೇಶ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಿದ್ದು, ವೈಟ್‌ಫೀಲ್ಡ್ ಡಿಸಿಪಿಯಿಂದ ಪೇದೆಗೆ ಸನ್ಮಾನ ಮತ್ತು 10 ಸಾವಿರ ರೂ. ನಗದು ಬಹುಮಾನ ದೊರೆತಿದೆ. ಜತೆಗೆ ಪೇದೆ ವೆಂಕಟೇಶ್ ನವೆಂಬರ್‌ನಲ್ಲಿ ಮದುವೆಯಾಗುತ್ತಿದ್ದು, ಹಿರಿಯ ಅಧಿಕಾರಿಗಳು ಹನಿಮೂನ್ ಪ್ಯಾಕೇಜ್ ಗಿಫ್ಟ್ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ