ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಸರಕಾರಿ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ನಿಲ್ಲಿಸಿ, ಚಾಲಕರನ್ನು ವಶಕ್ಕೆ ಪಡೆದು ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಸಂಜಯ್ ಕುಮಾರ್ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ ಮುಖ್ಯ ಚುನಾವಣಾಧಿಕಾರಿ ಸಂಜಯ್ಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಸರಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್ ಅಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಧಿಕಾರಿಗಳು ವಾಹನಗಳನ್ನು ನಡುರಸ್ತೆಯಲ್ಲಿ ನಿಲ್ಲಿಸಿ ನೋಟಿಸ್ ನೀಡುತ್ತಿದ್ದಾರೆ. ಈಗಾಗಲೇ 300 ವಾಹನಗಳನ್ನು ವಶಕ್ಕೆ ಪಡೆದಿದ್ದು, ಇದರಿಂದ ಚಾಲಕರು ಖಿನ್ನತೆಗೆ ಒಳಗಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಇತರೆ ವರ್ಗಗಳ ನೌಕರರಿಗೆ ಮುನ್ಸೂಚನೆ ನೀಡಲಾಗುತ್ತದೆ. ಆದರೆ ವಾಹನ ಚಾಲಕರಿಗೆ ಯಾವುದೇ ಮುನ್ಸೂಚನೆ ನೀಡದೆ ಸಾರ್ವಜನಿಕರ ಸಮ್ಮುಖದಲ್ಲಿ ದೌರ್ಜನ್ಯ ಎಸಗಲಾಗುತ್ತಿದೆ. ಆದ್ದರಿಂದ ಮುಖ್ಯ ಚುನಾವಣಾಧಿಕಾರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಧಿಕಾರಿಗಳು ವಾಹನಗಳನ್ನು ನಡುರಸ್ತೆಯಲ್ಲಿ ನಿಲ್ಲಿಸಿ ನೋಟಿಸ್ ನೀಡುತ್ತಿದ್ದಾರೆ. ಈಗಾಗಲೇ 300 ವಾಹನಗಳನ್ನು ವಶಕ್ಕೆ ಪಡೆದಿದ್ದು, ಇದರಿಂದ ಚಾಲಕರು ಖಿನ್ನತೆಗೆ ಒಳಗಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಇತರೆ ವರ್ಗಗಳ ನೌಕರರಿಗೆ ಮುನ್ಸೂಚನೆ ನೀಡಲಾಗುತ್ತದೆ. ಆದರೆ ವಾಹನ ಚಾಲಕರಿಗೆ ಯಾವುದೇ ಮುನ್ಸೂಚನೆ ನೀಡದೆ ಸಾರ್ವಜನಿಕರ ಸಮ್ಮುಖದಲ್ಲಿ ದೌರ್ಜನ್ಯ ಎಸಗಲಾಗುತ್ತಿದೆ. ಆದ್ದರಿಂದ ಮುಖ್ಯ ಚುನಾವಣಾಧಿಕಾರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.