ಆ್ಯಪ್ನಗರ

ಪುಂಡರ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರಿನಲ್ಲಿ ಪುಂಡರ ನಿಯಂತ್ರಣಕ್ಕೆ ಮತ್ತೆ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರ ಕಾಲುಗಳು ಸೀಳಿವೆ.

Vijaya Karnataka Web 20 Jun 2018, 10:35 am
ಬೆಂಗಳೂರು: ನಗರದಲ್ಲಿ ಪುಂಡರ ನಿಯಂತ್ರಣಕ್ಕೆ ಮತ್ತೆ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರ ಕಾಲುಗಳು ಸೀಳಿವೆ.
Vijaya Karnataka Web POLICE.


ರಾಜಗೋಪಾಲನಗರದ ಕರೀಂ ಸಾಬ್ ಲೇಔಟ್ ನಲ್ಲಿ ರಫಿ ಮತ್ತು ಸುಧಾಕರ್ ಎಂಬ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕಳೆದ ಶನಿವಾರ ರಾತ್ರಿ ಮಹಾಲಕ್ಷ್ಮಿ ಲೇಔಟ್ ನಲ್ಲಿ ರಫಿ ಮತ್ತು ಸುಧಾಕರ್ ಮನೆ ಮುಂದೆ ನಿಲ್ಲಿಸಿದ್ದಇಪ್ಪತ್ತಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಮಾಡಿದ್ದರು. ಇದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು.

ಆರೋಪಿಗಳು ಕರೀಂ ಸಾಬ್ ಲೇಔಟ್ ನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶರಣಾಗುವಂತೆ ಸೂಚಿಸಿದ್ದರೂ ಆರೋಪಿಗಳು ಪೊಲೀಸ್‌

ಮುಖ್ಯ ಪೇದೆ ಹನುಮಂತರಾಜು ಮತ್ತು ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಆಗ ಮಹಾಲಕ್ಷ್ಮಿ ಲೇಔಟ್ ಠಾಣೆಯ ಇನ್ಸ್‌ಪೆಕ್ಟರ್‌ ಲೋಹಿತ್ ರಫಿಯ ಬಲಗಾಲು ಮತ್ತು ಸುಧಾಕರ್‌ನ ಎಡಗಾಲಿಗೆ ಗುಂಡಿಕ್ಕಿದ್ದಾರೆ.

ರಡು ದಿನಗಳ ಹಿಂದೆ ನೂರಕ್ಕೂ ಹೆಚ್ಚು ಮಂದಿ ಸರಗಳ್ಳತನದಲ್ಲಿ ಭಾಗಿಯಾಗಿದ್ದ ಅಚ್ಯುತ್ ಕುಮಾರ್ ಗಣಿಯ ಕಾಲಿಗೆ ಪೊಲೀಸರು ಗುಂಡಿಕ್ಕಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ