ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಸಚಿವ ಮುನಿರತ್ನ ಹಾಗೂ ಸಂಸದ ಡಿಕೆ ಸುರೇಶ್ ನಡುವಿನ ಜಟಾಪಟಿ ತೀವ್ರಗೊಂಡಿದೆ. ಈ ನಡುವೆ ಪೋಸ್ಟರ್ ಅಭಿಯಾನವನ್ನು ಕಾಂಗ್ರೆಸ್ ಮುಂದುವರಿಸಿದ್ದು, ಕ್ಷೇತ್ರದಲ್ಲಿ ಶುಕ್ರವಾರವೂ ಹಲವು ಕಡೆಗಳಲ್ಲಿ ಮುನಿರತ್ನ ಅವರನ್ನು ಪ್ರಶ್ನೆ ಮಾಡಿ ಪೋಸ್ಟರ್ಗಳನ್ನು ಹಾಕಲಾಗಿದೆ.
ಆರ್. ಆರ್ ನಗರದಲ್ಲಿ ಶುಕ್ರವಾರವೂ ಪೋಸ್ಟರ್ ಅಭಿಯಾನ ಮುಂದುವರಿದಿದ್ದು, 10 ಸಾವಿರ ಕೋಟಿ ಅನುದಾನ ತೋರಿಸುವಂತೆ ಸಚಿವ ಮುನಿರತ್ನ ಅವರಿಗೆ ಸವಾಲು ಹಾಕಲಾಗಿದೆ. ಸಚಿವರ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಪೋಸ್ಟರ್ ಹಾಕಲಾಗಿದೆ.
ಪೋಸ್ಟರ್ನಲ್ಲಿ ಏನಿದೆ?
2013 ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಶಾಸಕ ಮುನಿರತ್ನಂ ಮಂಜೂರು ಮಾಡಿಸಿಕೊಂಡಿದ್ದಾರೆ. ಆದರೆ ರಸ್ತೆ, ಪಾರ್ಕ್, ಕೆರೆಗೆ ವಿನಿಯೋಗಿಸಿರುವುದು 2 ರಿಂದ 3 ಸಾವಿರ ಕೋಟಿ ರೂಪಾಯಿ ಮಾತ್ರ. ಹಾಗಾದರೆ ಉಳಿದ ಹಣ ಎಲ್ಲಿ ಹೋಯ್ತು? ಎಂದು ಪೋಸ್ಟರ್ನಲ್ಲಿ ಪ್ರಶ್ನೆ ಮಾಡಲಾಗಿದೆ.
Poster Campaign: ಮುನಿರತ್ನ ವಿರುದ್ಧ ಪೋಸ್ಟರ್ ಪ್ರಚಾರ: ಟಾಂಗ್ ಕೊಟ್ರಾ ಡಿಕೆ ಸುರೇಶ್
ಪೋಸ್ಟರ್'ಗಳಲ್ಲಿ ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contest ಎಂದು ಉಲ್ಲೇಖ ಮಾಡಲಾಗಿದೆ. 10 ಸಾವಿರ ಕೋಟಿ ರೂ. ಕಾಮಗಾರಿ ತೋರಿಸುವುದಾದರೆ ಕರೆ ಮಾಡಿ ಅತ್ಯಾಕರ್ಷಕ ಉಡುಗೊರೆ ಗೆಲ್ಲಿ. 8447704040 ಈ ನಂಬರ್ ಗೆ ಕಾಲ್ ಮಾಡಿ ಎಂದು ಮನವಿಯನ್ನೂ ಮಾಡಲಾಗಿದೆ.
ಏಕೆ ಪೋಸ್ಟರ್ ಅಭಿಯಾನ?
ಆರ್. ಆರ್ ನಗರದಲ್ಲಿ ಅನಧಿಕೃತವಾಗಿ ಸುಮಾರು 1.30 ಲಕ್ಷ ಮತಗಳ ಸೇರ್ಪಡೆಯಾಗಿದ್ದು, 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ಈ ವಿಚಾರವಾಗಿ ಕಾಂಗ್ರೆಸ್ ದೂರು ನೀಡಿತ್ತು.
ಮತಪಟ್ಟಿಯಲ್ಲಿ ಅಕ್ರಮ ಆಗಿರುವುದಕ್ಕೆ ಕ್ಷೇತ್ರದ ಶಾಸಕರು ಕಾರಣ ಎಂದೂ ಆರೋಪ ಮಾಡಲಾಗಿತ್ತು. ಆದರೆ ಈ ಆರೋಪವನ್ನು ಸಚಿವ ಮುನಿರತ್ನ ನಿರಾಕರಣೆ ಮಾಡಿದ್ದರು. ಇಂತಹ ನೀಚ ಕೆಲಸವನ್ನು ನಾನು ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದರು. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನವನ್ನು ಹಮ್ಮಿಕೊಂಡಿದೆ.
ಆರ್. ಆರ್ ನಗರದಲ್ಲಿ ಶುಕ್ರವಾರವೂ ಪೋಸ್ಟರ್ ಅಭಿಯಾನ ಮುಂದುವರಿದಿದ್ದು, 10 ಸಾವಿರ ಕೋಟಿ ಅನುದಾನ ತೋರಿಸುವಂತೆ ಸಚಿವ ಮುನಿರತ್ನ ಅವರಿಗೆ ಸವಾಲು ಹಾಕಲಾಗಿದೆ. ಸಚಿವರ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಪೋಸ್ಟರ್ ಹಾಕಲಾಗಿದೆ.
ಪೋಸ್ಟರ್ನಲ್ಲಿ ಏನಿದೆ?
2013 ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಶಾಸಕ ಮುನಿರತ್ನಂ ಮಂಜೂರು ಮಾಡಿಸಿಕೊಂಡಿದ್ದಾರೆ. ಆದರೆ ರಸ್ತೆ, ಪಾರ್ಕ್, ಕೆರೆಗೆ ವಿನಿಯೋಗಿಸಿರುವುದು 2 ರಿಂದ 3 ಸಾವಿರ ಕೋಟಿ ರೂಪಾಯಿ ಮಾತ್ರ. ಹಾಗಾದರೆ ಉಳಿದ ಹಣ ಎಲ್ಲಿ ಹೋಯ್ತು? ಎಂದು ಪೋಸ್ಟರ್ನಲ್ಲಿ ಪ್ರಶ್ನೆ ಮಾಡಲಾಗಿದೆ.
Poster Campaign: ಮುನಿರತ್ನ ವಿರುದ್ಧ ಪೋಸ್ಟರ್ ಪ್ರಚಾರ: ಟಾಂಗ್ ಕೊಟ್ರಾ ಡಿಕೆ ಸುರೇಶ್
ಪೋಸ್ಟರ್'ಗಳಲ್ಲಿ ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contest ಎಂದು ಉಲ್ಲೇಖ ಮಾಡಲಾಗಿದೆ. 10 ಸಾವಿರ ಕೋಟಿ ರೂ. ಕಾಮಗಾರಿ ತೋರಿಸುವುದಾದರೆ ಕರೆ ಮಾಡಿ ಅತ್ಯಾಕರ್ಷಕ ಉಡುಗೊರೆ ಗೆಲ್ಲಿ. 8447704040 ಈ ನಂಬರ್ ಗೆ ಕಾಲ್ ಮಾಡಿ ಎಂದು ಮನವಿಯನ್ನೂ ಮಾಡಲಾಗಿದೆ.
ಏಕೆ ಪೋಸ್ಟರ್ ಅಭಿಯಾನ?
ಆರ್. ಆರ್ ನಗರದಲ್ಲಿ ಅನಧಿಕೃತವಾಗಿ ಸುಮಾರು 1.30 ಲಕ್ಷ ಮತಗಳ ಸೇರ್ಪಡೆಯಾಗಿದ್ದು, 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ಈ ವಿಚಾರವಾಗಿ ಕಾಂಗ್ರೆಸ್ ದೂರು ನೀಡಿತ್ತು.
ಮತಪಟ್ಟಿಯಲ್ಲಿ ಅಕ್ರಮ ಆಗಿರುವುದಕ್ಕೆ ಕ್ಷೇತ್ರದ ಶಾಸಕರು ಕಾರಣ ಎಂದೂ ಆರೋಪ ಮಾಡಲಾಗಿತ್ತು. ಆದರೆ ಈ ಆರೋಪವನ್ನು ಸಚಿವ ಮುನಿರತ್ನ ನಿರಾಕರಣೆ ಮಾಡಿದ್ದರು. ಇಂತಹ ನೀಚ ಕೆಲಸವನ್ನು ನಾನು ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದರು. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನವನ್ನು ಹಮ್ಮಿಕೊಂಡಿದೆ.