ಆ್ಯಪ್ನಗರ

ಪಿಯು ಪ್ರಿಪರೇಟರಿ ಪರೀಕ್ಷೆ ನಡೆಸದ ಜಿಲ್ಲೆಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ನೋಟಿಸ್‌

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಖಜಾನೆಗಳಲ್ಲಿ ಶೇಖರಿಸಿಟ್ಟಿರುವ ಪ್ರಶ್ನೆಪತ್ರಿಕೆಗಳನ್ನು ಬಳಸದೆ ಕರ್ತವ್ಯಲೋಪವೆಸಗಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ಪ್ರಭಾರಿ ಉಪ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

Vijaya Karnataka Web 25 Jan 2020, 7:32 am
ಬೆಂಗಳೂರು: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಖಜಾನೆಗಳಲ್ಲಿ ಶೇಖರಿಸಿಟ್ಟಿರುವ ಪ್ರಶ್ನೆ ಪತ್ರಿಕೆಗಳನ್ನು ಬಳಸದೆ ಕರ್ತವ್ಯಲೋಪವೆಸಗಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ಪ್ರಭಾರಿ ಉಪ ನಿರ್ದೇಶಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಕಾರಣ ಕೇಳಿ ಶುಕ್ರವಾರ ನೋಟಿಸ್‌ ಜಾರಿ ಮಾಡಿದ್ದಾರೆ.
Vijaya Karnataka Web exam


ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಖಜಾನೆಗಳಲ್ಲಿನ ಪ್ರಶ್ನೆಪತ್ರಿಕೆಗಳನ್ನು ಬಳಸಿಕೊಂಡು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲ ಜಿಲ್ಲಾಉಪ ನಿರ್ದೇಶಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿತ್ತು. ವೇಳಾಪಟ್ಟಿಯನ್ನೂ ನಿಗದಿಪಡಿಸಲಾಗಿತ್ತು.

ಆದರೆ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಯ ಕಾಲೇಜುಗಳಲ್ಲಿ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗೆ ಖಜಾನೆಯಲ್ಲಿನ ಪ್ರಶ್ನೆಪತ್ರಿಕೆಗಳನ್ನು ಬಳಸದೆ ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದ್ದು, ಸಮಜಾಯಿಷಿ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ