ಆ್ಯಪ್ನಗರ

ಮೆಟ್ರೋ ಯೋಜನೆಗೆ ಮರ ಕಡಿಯುವುದಕ್ಕೆ ನಿರ್ಬಂಧ ಮುಂದುವರಿಕೆ

ನಗರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮರಗಳನ್ನು ಕತ್ತರಿಸಲು ಮತ್ತು ಸ್ಥಳಾಂತರ ಮಾಡಲು ಅನುಮತಿ ನೀಡಿದರೆ, ಆ ಕುರಿತ ಎಲ್ಲ ಮಾಹಿತಿಗಳನ್ನು ಪಾಲಿಕೆಯ ವೆಬ್‌ ಸೈಟ್‌ನಲ್ಲಿ ಅಪಲೋಡ್‌ ಮಾಡಬೇಕು ಎಂದು ಹೈಕೋರ್ಟ್‌, ಬಿಬಿಎಂಪಿಗೆ ಆದೇಶಿಸಿದೆ.

Vijaya Karnataka Web 18 Nov 2020, 11:45 pm
ಬೆಂಗಳೂರು: ನಗರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮರಗಳನ್ನು ಕತ್ತರಿಸಲು ಮತ್ತು ಸ್ಥಳಾಂತರ ಮಾಡಲು ಅನುಮತಿ ನೀಡಿದರೆ, ಆ ಕುರಿತ ಎಲ್ಲ ಮಾಹಿತಿಗಳನ್ನು ಪಾಲಿಕೆಯ ವೆಬ್‌ ಸೈಟ್‌ನಲ್ಲಿ ಅಪಲೋಡ್‌ ಮಾಡಬೇಕು ಎಂದು ಹೈಕೋರ್ಟ್‌, ಬಿಬಿಎಂಪಿಗೆ ಆದೇಶಿಸಿದೆ.
Vijaya Karnataka Web bengaluru metro
Bengaluru metro (File photo)


ಅಲ್ಲದೆ, ಮೆಟ್ರೊ ರೈಲು ಯೋಜನೆಗಾಗಿ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ನಗರದ ಹಲವೆಡೆ ಮರಗಳನ್ನು ಕತ್ತರಿಸುವುದಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಿದೆ.

2018ರಲ್ಲಿ ಮೆಟ್ರೊ ಯೋಜನೆಗಳಿಗೆ ಮರ ಕತ್ತರಿಸುವುದನ್ನು ಸ್ಥಗಿತಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರು ಎನ್ವಿರಾನ್‌ಮೆಂಟ್‌ ಟ್ರಸ್ಟ್‌ ಮತ್ತು ದತ್ತಾತ್ರೇಯ ಟಿ.ದೇವರೆ ಸಲ್ಲಿಸಿದ್ದ ಪಿಐಎಲ್‌ ಮನವಿ ಆಲಿಸಿದ ಸಿಜೆ ಎ.ಎಸ್‌. ಓಕ್‌ ಅವರಿದ್ದ ವಿಭಾಗೀಯಪೀಠ, ಈ ಆದೇಶ ನೀಡಿದೆ.

ನಮ್ಮ ಮೆಟ್ರೋ: ಟಿಕೆಟ್‌ ಕೌಂಟರ್‌ನಲ್ಲೇ ಸ್ಮಾರ್ಟ್‌ ಕಾರ್ಡ್‌ ರೀಚಾರ್ಜ್‌ಗೆ ಅವಕಾಶ!

ತಜ್ಞರ ಸಮಿತಿ ನೀಡಿರುವ ಶಿಫಾರಸುಗಳನ್ನು ಪಾಲಿಕೆ ಅಳವಡಿಸಿಕೊಳ್ಳಬೇಕು, ಮರಗಳನ್ನು ಕತ್ತರಿಸಲು ಅಥವಾ ಸ್ಥಳಾಂತರ ಮಾಡಲು ಅನುಮತಿ ನೀಡುವ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿರಬೇಕು. ಆ ಕುರಿತ ಎಲ್ಲ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುವ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಾಲಯ ಪಾಲಿಕೆ ಪರ ವಕೀಲರಿಗೆ ನಿರ್ದೇಶನ ನೀಡಿತು.

ಪಾಲಿಕೆ ಪರ ವಾದ ಮಂಡಿಸಿದ ವಕೀಲ ಎನ್‌.ಕೆ. ರಮೇಶ್‌ ಕೂಡ ಅದಕ್ಕೆ ಸಮ್ಮತಿ ಸೂಚಿಸಿ, ನ್ಯಾಯಾಲಯದ ನಿರ್ದೇಶನದಂತೆ ಪಾಲಿಕೆ ಎಲ್ಲಮಾಹಿತಿ ವೆಬ್‌ಸೈಟ್‌ನಲ್ಲಿ ಹಾಕಲು ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಯಲಚೇನಹಳ್ಳಿ-ನೈಸ್‌ ರಸ್ತೆ ಜಂಕ್ಷನ್‌ ಮಾರ್ಗದಲ್ಲಿ ಶೀಘ್ರ ವಾಣಿಜ್ಯ ಸಂಚಾರ

ಬಿಎಂಆರ್‌ಸಿಎಲ್‌ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಉದಯ್‌ ಹೊಳ್ಳ, ''ಮರಗಳನ್ನು ಕತ್ತರಿಸುವುದಕ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅನುಮತಿ ನೀಡಬಹುದು. ಆದರೆ ಸದ್ಯಕ್ಕೆ ಮರಗಳನ್ನು ಸ್ಥಳಾಂತರ ಪ್ರಕ್ರಿಯೆಗೆ ಅನುಮತಿ ನೀಡಿದರೆ ಒಳ್ಳೆಯದು. ಇಲ್ಲವಾದರೆ ಸಾರ್ವಜನಿಕರ ಹಣ ತಿಂಗಳಿಗೆ ಸುಮಾರು 20 ಕೋಟಿ ರೂ. ವ್ಯಯವಾಗುತ್ತದೆ'' ಎಂದು ನ್ಯಾಯಾಲಯವನ್ನು ಕೋರಿದರು. ಅದಕ್ಕೆ ನ್ಯಾಯಾಲಯ ಒಪ್ಪಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ