ಆ್ಯಪ್ನಗರ

ಶರಾವತಿ ನದಿ ಉಳಿಸಿ ಹೋರಾಟಕ್ಕೆ ರಾಜ್ಯ ರಾಜಧಾನಿಯಲ್ಲೂ ಬೆಂಬಲ: ಪುರಭವನದ ಬಳಿ ಪ್ರತಿಭಟನೆ

ಶಿವಮೊಗ್ಗ, ಹೊನ್ನಾವರ, ಸಾಗರ ಹಾಗೂ ಮಲೆನಾಡಿನ ನಾನಾ ಭಾಗಗಳಿಂದ ಆಗಮಿಸಿ ನಗರದಲ್ಲಿ ನೆಲೆಸಿರುವ ವಿದ್ಯಾರ್ಥಿಗಳು ಹಾಗೂ ಪರಿಸರ ಪ್ರೇಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Vijaya Karnataka Web 10 Jul 2019, 5:26 pm
ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಶರಾವತಿ ನದಿ ಉಳಿಸಿ ಹೋರಾಟಕ್ಕೆ ರಾಜ್ಯ ರಾಜಧಾನಿಯಲ್ಲೂ ಬೆಂಬಲ ವ್ಯಕ್ತವಾಗಿದೆ. ನಗರದ ಪುರಭವನದ ಬಳಿ ಶರಾವತಿ ನದಿ ಉಳಿಸಿ ಹೋರಾಟ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆದಿದೆ.
Vijaya Karnataka Web save sharavathi


ಪೋಸ್ಟ್‌ ಕಾರ್ಡ್ ಪ್ರತಿಭಟನೆ


ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ, ಹೊನ್ನಾವರ, ಸಾಗರ ಹಾಗೂ ಮಲೆನಾಡಿನ ನಾನಾ ಭಾಗಗಳಿಂದ ಆಗಮಿಸಿ ನಗರದಲ್ಲಿ ನೆಲೆಸಿರುವ ವಿದ್ಯಾರ್ಥಿಗಳು ಹಾಗೂ ಪರಿಸರ ಪ್ರೇಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: ಬೆಂಗಳೂರಿಗೆ ಶರಾವತಿ ನೀರು: ಇಂದು ಶಿವಮೊಗ್ಗ ಜಿಲ್ಲೆ ಬಂದ್‌

ಪೋಸ್ಟ್‌ ಕಾರ್ಡ್

ಪ್ರತಿಭಟನೆ" />
ಪೋಸ್ಟ್ ಕಾರ್ಡ್ ಚಳವಳಿ ರೂಪದಲ್ಲಿ ಪ್ರತಿಭಟನಾಕಾರರು ಸುಮಾರು 200 ಕಾರ್ಡ್ಗಳನ್ನು ಸರಕಾರದ ಮುಖ್ಯ ಕಾರ್ಯದರ್ಶಿಗೆ ರವಾನಿಸಿ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆಯನ್ನು ಕೈಬಿಡಲು ಒತ್ತಾಯಿಸಲಾಗುವುದು ಎಂದು ಒಕ್ಕೂಟದ ಪದಾಧಿಕಾರಿ ವಿಶ್ವಾಸ್ ಭಾರಧ್ವಾಜ್ ಪ್ರತಿಕ್ರಿಯೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ