ಆ್ಯಪ್ನಗರ

ಎರಡು ಗಂಟೆ ಸುರಿದ ಮಳೆ ಹೊಡೆತಕ್ಕೆ ಒದ್ದೆ ಮುದ್ದೆಯಾದ ಬೆಂಗಳೂರು

ಇಡೀ ರಾಜ್ಯದಲ್ಲಿ ವರುಣನ ಆರ್ಭಟ ಮುಗಿದ ನಂತರ ಈಗ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

Vijaya Karnataka Web 20 Aug 2019, 10:49 pm
ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರದ ನಂತರ ಈಗ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ.
Vijaya Karnataka Web ಮಳೆ
ಮಳೆ


ಮಂಗಳವಾರ ಸಂಜೆಯಿಂದಲೇ ವರುಣ ಆರ್ಭಟ ಜೋರಾಗಿ ಸಾಗಿದೆ.

ಹಲವಾರು ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ನಾಗರಿಕರು, ವಾಹನ ಸವಾರರು ಮಳೆಯಿಂದ ತೊಂದರೆಗೀಡಾದರು. ಮಂಗಳವಾರ ಕಚೇರಿ ಮುಗಿಸಿ ಮನೆಗೆ ತೆರಳಲು ತಯಾರಾಗಿದ್ದ ಉದ್ಯೋಗಿಗಳಿಗೆ ತೀವ್ರ ತೊಂದರೆ ಉಂಟಾಯಿತು.

ಮಳೆ 1


ಬೆಂಗಳೂರಿನಲ್ಲಿ ರಾತ್ರಿ ಕೂಡ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ. ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರು ಭಾರಿ ತೊಂದರೆಗೀಡಾದರು.

ಎಂಜಿ ರಸ್ತೆ, ಶ್ರೀನಿವಾಸನಗರ, ಹನುಮಂತನಗರ, ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಮಲ್ಲೇಶ್ವರ, ರಾಜಾಜಿನಗರ, ಯಶವಂತಪುರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ಭಾರಿ ಮಳೆ


ಮೆಜೆಸ್ಟಿಕ್‌, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ ವಾಹನ ಸಂಚಾರಕ್ಕೆ ಧಕ್ಕೆಯಾಗಿದೆ.

ರಾಜ್ಯದ ಇತರೆಡೆಗಳಲ್ಲಿಯೂ ಭಾರಿ ಮಳೆಯಾಗಿರುವ ವರದಿಯಾಗಿದೆ.

ಆಗಸ್ಟ್‌ 21 ಮತ್ತು 22ರಂದು ಬೆಂಗಳೂರಿನ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ