ಆ್ಯಪ್ನಗರ

ಮಳೆ ನೀರು: ಕೆ.ಆರ್‌.ಪುರಂ ಶಾಲೆಗೆ ರಜೆ

ಭಾನುವಾರ ರಾತ್ರಿ ಕೂಡ ಧಾರಕಾರ ಮಳೆ ಸುರಿದಿರುವ ಕಾರಣ ಕೆ.ಆರ್.ಪುರದ ಸರಕಾರಿ ಶಾಲಾ ಕಟ್ಟಡದಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಶಾಲೆಗೆ ರಜೆ ನೀಡಲಾಗಿದೆ.

ವಿಕ ಸುದ್ದಿಲೋಕ 4 Sep 2017, 12:04 pm
ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿ ಮಳೆ ಸುರಿದಿರುವ ಕಾರಣ ಕೆ.ಆರ್.ಪುರದ ಸರಕಾರಿ ಶಾಲಾ ಕಟ್ಟಡದಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಶಾಲೆಗೆ ರಜೆ ನೀಡಲಾಗಿದೆ.
Vijaya Karnataka Web rain water holiday for school
ಮಳೆ ನೀರು: ಕೆ.ಆರ್‌.ಪುರಂ ಶಾಲೆಗೆ ರಜೆ


ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೊಂದಿಕೊಂಡಿರುವ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಅವರಣ ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದೆ.ಕೆ.ಆರ್.ಪುರದ ದೇವಸಂದ್ರ ವಾರ್ಡ್‌ನ ತ್ರಿವೇಣಿ ನಗರ ಸೇರಿದಂತೆ ಹಲವೆಡೆ ತಗ್ಗು ಪ್ರದೇಶದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು ಜನ ಮನೆಗಳಿಂದ ಹೊರಬರಲಾಗದೆ ಪರದಾಡುವಂತಾಗಿದೆ. ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾದಿಕಾರಿ ಸಲೀಂ ರವರಿಂದ ರಜೆ ಘೋಷಿಸಿದ್ದಾರೆ. ವಸಂತಪುರ ಬಳಿಯ ಜನಾರ್ದ ಕೆರೆ ಕೋಡಿ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿದೆ.

ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಒಂದೆರಡು ದಿನ ಮುಂದುವರಿಯುವ ಸೂಚನೆಗಳಿದ್ದು, ನಗರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಮಳೆ ನೀರಿನ ಕಾರಣಕ್ಕೆ ಬೆಂಗಳೂರು ಈಗಾಗಲೇ ತತ್ತರಿಸಿದ್ದು, ರಸ್ತೆಗಳು, ತಗ್ಗು ಪ್ರದೇಶದಲ್ಲಿರುವ ಮನೆಗಳು, ಕಟ್ಟಡಗಳು ಜಲಾವೃತಗೊಂಡಿವೆ.

ತಮಿಳುನಾಡು ಕರಾವಳಿ ಭಾಗಗಳಲ್ಲಿ ಚಂಡಮಾರುತ ರೀತಿಯ ವಾತಾವರಣ ನಿರ್ಮಾಣವಾಗಿರುವ ಕಾರಣದಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಕೆರೆಗಳು ಉಕ್ಕಿ ಹರಿಯುವ ಆತಂಕ ಕೂಡ ಎದುರಾಗಿದ್ದು. ಮಳೆ ಅನಾಹುತ ಶಾಶ್ವತ ತಡೆಗೆ ಮುನ್ನೂರು ಕೋಟಿ ಬಿಡುಗಡೆಗೊಳಿಸುವುದಾಗಿ ಸಚಿವ ಜಾರ್ಜ್‌ ಪ್ರಕಟಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ