ಆ್ಯಪ್ನಗರ

ಮತದಾರರ ಬಳಿ ಭಿಕ್ಷೆ ಕೇಳಿದ್ದೇನೆ, ಅಭಿವೃದ್ದಿಗೆ ಮತ ಹಾಕ್ತಾರೆ ಎಂಬ ನಂಬಿಕೆ, ಮುನಿರತ್ನ ವಿಶ್ವಾಸ

ಅಭಿವೃದ್ದಿಗೆ ಜನರು ಮತ ಹಾಕುತ್ತಾರೆ ಎಂಬ ವಿಶ್ವಾಸ ಇದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅವರು ಏನಂದ್ರು ಎಂಬ ವಿವರ ಇಲ್ಲಿದೆ.

Vijaya Karnataka Web 3 Nov 2020, 10:34 am
ಬೆಂಗಳೂರು: ಭಿಕ್ಷುಕರು ಅಮ್ಮಾ ತಾಯಿ ಭಿಕ್ಷೆ ಎಂದು ಕೇಳಿದ ಹಾಗೆ ನಾನು ಅಮ್ಮಾ ತಾಯಿ ಮತ ಹಾಕಿ ಎಂದು ಭಿಕ್ಷೆ ಕೇಳಿದ್ದೇನೆ, ಅಭಿವೃದ್ದಿಗೆ ಜನರು ಮತ ಹಾಕುತ್ತಾರೆ ಎಂಬ ವಿಶ್ವಾಸ ಇದೆ. ಹೀಗಂದವರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ.
Vijaya Karnataka Web muniratna munirathna


ಬೆಂಗಳೂರಿನಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಇದೊಂದು ಮರೆಯಲಾಗದ ಚುನಾವಣೆ ಎಂದರು. ಮತಗಟ್ಟೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ತಪಾಸಣೆ ನಡೆಸಿದ್ದಾರೆ. ಇದೊಂದು ಮರೆಯಲಾದ ಸಂದರ್ಭವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮತಚಲಾವಣೆ ಮಾಡಬೇಕು ಎಂದು ಮನವಿ ಮಾಡಿದರು. ಮತದಾನ ಮಾಡುವುದು ನಮ್ಮ ಹಕ್ಕು. ಯಾವುದೇ ಕಾರಣಕ್ಕೂ ಈ ಹಕ್ಕನ್ನು ನಾವು ಕಳೆದುಕೊಳ್ಳಬಾರದು. ಕ್ಷೇತ್ರದ ಅಭಿವೃದ್ದಿಗೆ ಜನರು ಮತ ಹಾಕುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಆರ್‌ ಆರ್‌ ನಗರ ಬೈಎಲೆಕ್ಷನ್: ಮತದಾನಕ್ಕೂ ಮೊದಲು ದೇವರ ಮೊರೆ ಹೋದ ಕುಸುಮಾ

ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣದ ಆಮಿಷ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕ್ಷೇತ್ರದ ಮತದಾರರಿಗೆ ಆಮಿಷ ನೀಡುವ ಮೂಲಕ ಚುನಾವಣಾ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಉಪ ಚುನಾವಣೆಗೆ ಮುನಿರತ್ನ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ತಿಮ್ಮಪ್ಪನ ಮೊರೆ ಹೋದ ಮುನಿರತ್ನ

ಇನ್ನು ಮತದಾನಕ್ಕೂ ಮೊದಲು ಮುನಿರತ್ನ ನಾಯ್ಡು ತಿರುಪತಿ ತಿಮ್ಮಪ್ಪನ ಮೊರೆ ಹೋದರು. ಮಲ್ಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುನಿರತ್ನ ತಿಮ್ಮಪ್ಪನ ದರ್ಶನ ಪಡೆದರು.

Live Updates: ಇಂದು ಶಿರಾ, ಆರ್ ಆರ್ ನಗರ ಉಪಚುನಾವಣೆ; ಸುರಕ್ಷತೆ ಪಾಲಿಸಿ, ಬಿಎಸ್ ವೈ ಮನವಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗಿನಿಂದಲೇ ಮತದಾನ ನೀರಸವಾಗಿದ್ದು ಬೆಳಗ್ಗೆ 9 ಗಂಟೆಯ ವರೆಗೆ ಶೇ. 6.27 ರಷ್ಟು ಮತದಾನ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ