ಆ್ಯಪ್ನಗರ

ಆರ್‌. ಆರ್‌ ನಗರ ಬೈ ಎಲೆಕ್ಷನ್: ಮುನಿರತ್ನಗೆ ಸ್ವಪಕ್ಷೀಯರ ಕಾಟ!

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿರುವ ಮುನಿರತ್ನಗೆ ಸ್ವಪಕ್ಷೀಯರಿಂದಲೇ ಕಾಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಮುನಿರತ್ನಗೆ ಟಿಕೆಟ್‌ ಬಹುತೇಕ ಪಕ್ಕಾ ಆದರೂ ಮುನಿರಾಜು ಗೌಡ ತಾನೂ ಕೂಡಾ ಆಕಾಂಕ್ಷಿಯಾಗಿದ್ದೇನೆ ಎಂದಿದ್ದಾರೆ.

Vijaya Karnataka Web 30 Sep 2020, 9:36 am
ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಆರ್‌.ಆರ್‌ ನಗರ ವಿಧಾನಸಭಾ ಕ್ಷೇತ್ರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ಪರಿಣಾಮ ತೆರವಾಗಿರುವ ಕ್ಷೇತ್ರದಲ್ಲಿ ಇದೀಗ ಬಿಜೆಪಿಯಿಂದ ಸ್ಪರ್ಧೆ ನಡೆಸಲು ಮುನಿರತ್ನ ಸಜ್ಜಾಗುತ್ತಿದ್ದಾರೆ. ಆದರೆ ಈ ಬಾರಿ ಮುನಿರತ್ನ ಅವರಿಗೆ ಸ್ವಪಕ್ಷೀಯರಿಂದಲೇ ಕಾಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
Vijaya Karnataka Web Munirathna


2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ನಡೆಸಿದ್ದ ಮುನಿರತ್ನ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅವರ ವಿರುದ್ಧ ಗೆಲುವು ಕಂಡಿದ್ದರು. ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮುನಿರಾಜು ಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣ ಇನ್ನು ವಿಚಾರಣೆಯ ಹಂತದಲ್ಲಿದೆ.

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗಲಿದೆ, ಕೆ. ಸುಧಾಕರ್‌ ವಿಶ್ವಾಸ

ಈ ನಡುವೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ. ಆಪರೇಷನ್‌ ಕಮಲದ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲು ಬಿಎಸ್‌ವೈ ನಿರ್ಧರಿಸಿದ್ದಾರೆ. ಆದರೆ ಮುನಿರಾಜು ಗೌಡ ಕೂಡಾ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೆ ನೀಡಿರುವುದು ಕುತೂಹಲ ಕೆರಳಿಸಿದೆ. ಮುನಿರಾಜು ಗೌಡಗೆ ಸಂಘಪರಿವಾರದ ಹಿನ್ನೆಲೆ ಇದ್ದು ಹೈಕಮಾಂಡ್‌ ಮಟ್ಟದಲ್ಲಿರುವ ರಾಜ್ಯ ನಾಯಕರ ಜೊತೆಗೆ ಉತ್ತಮ ನಂಟು ಹೊಂದಿದ್ದಾರೆ.

ಆದರೆ ಪಕ್ಷದ ನಿರ್ಧಾರ ಏನು ಎಂಬುವುದು ಇನ್ನೂ ಅಧಿಕೃತಗೊಂಡಿಲ್ಲ. ಬಿಜೆಪಿ ಮೂಲಗಳ ಪ್ರಕಾರ ಮುನಿರತ್ನಗೆ ಟಿಕೆಟ್‌ ಸಿಗುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ. ಸದ್ಯ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಪಕ್ಷದ ತೀರ್ಮಾನವೇ ಅಂತಿಮ ಎಂದು ಮುನಿರಾಜು ಗೌಡ ಹೇಳುತ್ತಿದ್ದರೂ ಆಂತರಿಕವಾಗಿ ಭಿನ್ನಮತ ಬಿಗಡಾಯಿಸುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಉಪಚುನಾವಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ