ಆ್ಯಪ್ನಗರ

ಆರ್‌ ಆರ್‌ ನಗರ: ಕಾಂಗ್ರೆಸ್‌ಗೆ ಕಾರ್ಯಕರ್ತರ ಕೊರತೆಯೇ ಸವಾಲು!

ಆರ್‌ ಆರ್‌ ನಗರದಲ್ಲಿ ಕಾಂಗ್ರೆಸ್‌ಗೆ ಕಾರ್ಯಕರ್ತರ ಕೊರತೆಯೇ ಬಹುದೊಡ್ಡ ಸವಾಲಾಗಿದೆ. ಮುನಿರತ್ನ ಜೊತೆಗೆ ಕಾರ್ಯಕರ್ತರ ದೊಡ್ಡ ಪಡೆಯೇ ಬಿಜೆಪಿಗೆ ಸೇರ್ಪಡೆಗೊಂಡಿದೆ. ಇದು ಉಪಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.

Vijaya Karnataka Web 29 Oct 2020, 10:35 am
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ಕ್ಷೇತ್ರದಲ್ಲಿ ಮುನಿರತ್ನ ವರ್ಸಸ್ ಕುಸುಮಾ ನಡುವೆ ಪೈಪೋಟಿ ತೀವ್ರಗೊಳ್ಳುತ್ತಿದೆ. ಹೀಗಿದ್ದರೂ ಕಾಂಗ್ರೆಸ್‌ಗೆ ಆರ್‌ಆರ್‌ ನಗರದಲ್ಲಿ ಬಹುದೊಡ್ಡ ಹಿನ್ನಡೆ ಉಂಟಾಗಿರುವುದು ಕಾರ್ಯಕರ್ತರ ಕೊರತೆ.
Vijaya Karnataka Web kusuma


ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಮುನಿರತ್ನ ಆಪರೇಷನ್‌ ಕಮಲದ ಮೂಲಕ ಬಿಜೆಪಿಗೆ ವಲಸೆ ಹೋದರು. ಕೇವಲ ಅವರೊಬ್ಬರೇ ಕಾಂಗ್ರೆಸ್ ತೊರೆದಿದ್ದಲ್ಲ. ಅವರ ಜೊತೆಗಿದ್ದ ಪಾಲಿಕೆ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಕೂಡಾ ಪಕ್ಷ ತೊರೆದರು.

ಮುನಿರತ್ನ ಇದ್ದಾಗ ತಳಮಟ್ಟದಲ್ಲಿ ಪಕ್ಷ ಸಂಘಟನೆ ಬಲಿಷ್ಠವಾಗಿತ್ತು. ಆದರೆ ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ಎಲ್ಲವೂ ಆರಂಭದಿಂದ ಶುರುಮಾಡಬೇಕಾಗಿದೆ. ಚುನಾವಣಾ ಪ್ರಚಾರದ ನಡುವೆ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ಕಾಂಗ್ರೆಸ್ ಪಾಲಿಗೆ ಬಹುದೊಡ್ಡ ಸವಾಲಾಗಿದೆ.

ಡಿಕೆಶಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಎಸ್‌ ಟಿ ಸೋಮಶೇಖರ್‌ ವಾಗ್ದಾಳಿ

ಪಕ್ಷದಲ್ಲಿ ಕಾರ್ಯಕರ್ತರೇ ದೊಡ್ಡ ಆಸ್ತಿ. ಕಾಂಗ್ರೆಸ್‌ನಲ್ಲಿ ಪಕ್ಷ ನಿಷ್ಠೆಗಿಂತ ವ್ಯಕ್ತಿ ನಿಷ್ಠೆಯೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ಮುನಿರತ್ನ ಪಕ್ಷಾಂತರ ಆದಾಗ ಬಹುದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರೂ, ಮುಖಂಡರೂ ಪಕ್ಷಾಂತರರಾದರು.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿದ್ದ ಕಾಂಗ್ರೆಸ್ ಆರು ಪಾಲಿಕೆ ಸದಸ್ಯರನ್ನು ಹೊಂದಿತ್ತು. ಆದರೆ ಇದೀಗ ಅವರೆಲ್ಲರೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾರ್ಪೊರೇಟರ್‌ಗಳ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಇದು ಬಹುದೊಡ್ಡ ಹಿನ್ನಡೆ ಎಂಬುವುದು ಕೆಲವು ಕಾಂಗ್ರೆಸ್ ಮುಖಂಡರ ವಾದ.

ಶಿರಾ ಬೈಲೆಕ್ಷನ್: ಮತದಾರರ ಮನಗೆಲ್ಲುವ ಯತ್ನ, ಮೂರು ಪಕ್ಷಗಳಿಂದ ಬಿರುಸಿನ ಪ್ರಚಾರ

ಈ ಕಾರಣಕ್ಕಾಗಿಯೇ ಹೊರ ಭಾಗದಿಂದ ಕಾರ್ಯಕರ್ತರನ್ನು ತಂದು ಕಾಂಗ್ರೆಸ್ ಪ್ರಚಾರ ನಡೆಸುತ್ತಿದೆ. ಆದರೆ ಸ್ಥಳೀಯ ಸಂಘಟನೆಯ ಕೊರತೆಯನ್ನು ನೀಗಿಸಲು ಇದರಿಂದ ಸಾಧ್ಯವಿಲ್ಲ. ಇವೆಲ್ಲವೂ ಮುನಿರತ್ನಗೆ ಅನುಕೂಲವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಾಗಿದೆ ಎಂದೇ ಹೇಳಲಾಗುತ್ತಿದೆ.

ಹೊರಗಿನಿಂದ ಕಾರ್ಯಕರ್ತರನ್ನು ಕರೆತರುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಹೊಡೆದಾಟಗಳು ನಡೆದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮತ್ತೊಂದು ಕಡೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿ ಉಂಟು ಮಾಡಿದ ಘಟನೆಯೂ ನಡೆದಿದೆ.

ಒಟ್ಟಿನಲ್ಲಿ ಸ್ಥಳೀಯವಾಗಿ ಪಕ್ಷವನ್ನು ಮತ್ತೆ ಸಂಘಟಿಸುವುದು ಕಾಂಗ್ರೆಸ್‌ಗೆ ಸವಾಲಿನ ಕೆಲಸವಾಗಿದೆ. ಇದು ಚುನಾವಣಾ ಫಲಿತಾಂಶದ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರಲಿದೆ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ