ಆ್ಯಪ್ನಗರ

ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿ.ಡಿ ಪ್ರಕರಣ: ಲಿಖಿತ ವಾದ ಸಲ್ಲಿಕೆ ವಿಳಂಬಕ್ಕೆ ಹೈಕೋರ್ಟ್‌ ಅಸಮಾಧಾನ

ಈಗಾಗಲೇ ಹಲವು ಬಾರಿ ಕಾಲಾವಕಾಶ ನೀಡಿದ್ದರೂ ಸರಕಾರ, ಎಸ್‌ಐಟಿ ಮತ್ತು ರಮೇಶ್‌ ಜಾರಕಿಹೊಳಿ ಸೇರಿದಂತೆ ಇತರೆ ಪ್ರತಿವಾದಿಗಳು ತಮ್ಮ ಲಿಖಿತ ವಾದ ಸಲ್ಲಿಸಿಲ್ಲ. ಲಿಖಿತ ವಾದ ಸಲ್ಲಿಸದ ಹೊರತು ವಾದ-ಪ್ರತಿವಾದ ಆಲಿಸುವುದಿಲ್ಲ. ಹಾಗಾಗಿ, ಮತ್ತೊಮ್ಮೆ 10 ದಿನ ಕಾಲಾವಕಾಶ ನೀಡಲಾಗುವುದು. ಅಷ್ಟರೊಳಗೆ ಎಲ್ಲರೂ ತಮ್ಮ ಲಿಖಿತ ವಾದ ಸಲ್ಲಿಸಬೇಕು. ಮತ್ತಷ್ಟು ವಿಳಂಬ ಮಾಡಬಾರದು ಎಂದು ಹೈಕೋರ್ಟ್‌ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

Vijaya Karnataka 27 Sep 2022, 12:01 am

ಹೈಲೈಟ್ಸ್‌:

  • ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿ.ಡಿ ಬಹಿರಂಗ ಪ್ರಕರಣ
  • ಲಿಖಿತ ವಾದ ಸಲ್ಲಿಸದ ಹೊರತು ವಾದ-ಪ್ರತಿವಾದ ಆಲಿಸುವುದಿಲ್ಲ
  • ಲಿಖಿತ ವಾದ ಸಲ್ಲಿಕೆ ವಿಳಂಬಕ್ಕೆ ಹೈಕೋರ್ಟ್‌ ತೀವ್ರ ಅಸಮಾಧಾನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ramesh Jarkiholi and highcourt
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದಲ್ಲಿ ಎಸ್‌ಐಟಿ ಹಾಗೂ ಇತರ ಪ್ರತಿವಾದಿಗಳು ಲಿಖಿತ ವಾದ ಸಲ್ಲಿಕೆ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿದ ಆದೇಶ ಮತ್ತು ಸದಾಶಿವನಗರ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್‌ ದೂರು ಸಂಬಂಧದ ಎಫ್‌ಐಆರ್‌ ರದ್ದು ಕೋರಿ ಸಂತ್ರಸ್ತೆ ಹಾಗೂ ಆರೋಪಿಗಳಿಬ್ಬರು ಸಲ್ಲಿಸಿರುವ ಅರ್ಜಿಗಳು ಅಂತಿಮ ವಿಚಾರಣೆಗೆ ನ್ಯಾಯಮೂರ್ತಿ ಎಸ್‌.ಸುನಿಲ್‌ದತ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದವು.
ವಾರ್ಡ್‌ವಾರು ಮೀಸಲಿನಲ್ಲಿ ಒಬಿಸಿಗೆ ಸಮರ್ಪಕ ನ್ಯಾಯ: ಹೈಕೋರ್ಟ್‌ನಲ್ಲಿ ಸರಕಾರದ ಸಮರ್ಥನೆ
ಆಗ ಸಂತ್ರಸ್ತೆ ಪರ ವಾದ ಮಂಡಿಸಲು ಸುಪ್ರೀಂಕೋರ್ಟ್‌ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌, 'ಕಳೆದ ವಿಚಾರಣೆ ವೇಳೆ ಸೆ.5ರಂದು ಲಿಖಿತ ವಾದದ ಮುಖ್ಯಾಂಶ ಸಲ್ಲಿಸುವಂತೆ ಪಕ್ಷಕಾರರಿಗೆ (ಅರ್ಜಿದಾರರು ಮತ್ತು ಪ್ರತಿವಾದಿಗಳು) ನ್ಯಾಯಾಲಯ ಸೂಚಿಸಿತ್ತು. ತಮ್ಮ ಲಿಖಿತ ವಾದವನ್ನು ಸಲ್ಲಿಸಲಾಗಿದೆ. ಆದರೆ, ಸರಕಾರ, ಎಸ್‌ಐಟಿ, ಅಮಿಕಸ್‌ ಕ್ಯೂರಿ ಸೇರಿದಂತೆ ಪ್ರತಿವಾದಿಗಳ್ಯಾರೂ ಲಿಖಿತ ವಾದ ಸಲ್ಲಿಸಿಲ್ಲ. ಹಾಗಾಗಿ, ಅವರ ಮಂಡಿಸಲಿರುವ ಕಾನೂನಾತ್ಮಕ ಅಂಶಗಳ ಬಗ್ಗೆ ನಮಗೆ ಯವುದೇ ಮಾಹಿತಿ ಇಲ್ಲವಾಗಿದೆ' ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಈಗಾಗಲೇ ಹಲವು ಬಾರಿ ಕಾಲಾವಕಾಶ ನೀಡಿದ್ದರೂ ಸರಕಾರ, ಎಸ್‌ಐಟಿ ಮತ್ತು ರಮೇಶ್‌ ಜಾರಕಿಹೊಳಿ ಸೇರಿದಂತೆ ಇತರೆ ಪ್ರತಿವಾದಿಗಳು ತಮ್ಮ ಲಿಖಿತ ವಾದ ಸಲ್ಲಿಸಿಲ್ಲ. ಲಿಖಿತ ವಾದ ಸಲ್ಲಿಸದ ಹೊರತು ವಾದ-ಪ್ರತಿವಾದ ಆಲಿಸುವುದಿಲ್ಲ. ಹಾಗಾಗಿ, ಮತ್ತೊಮ್ಮೆ 10 ದಿನ ಕಾಲಾವಕಾಶ ನೀಡಲಾಗುವುದು. ಅಷ್ಟರೊಳಗೆ ಎಲ್ಲರೂ ತಮ್ಮ ಲಿಖಿತ ವಾದ ಸಲ್ಲಿಸಬೇಕು. ಮತ್ತಷ್ಟು ವಿಳಂಬ ಮಾಡಬಾರದು ಎಂದು ಹೇಳಿತು.
BS Yediyurappa: ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ನೀಡಿದ ಸುಪ್ರೀಂ; ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ
'ಲಿಖಿತ ವಾದ ಸಲ್ಲಿಸಿದರೆ ಅದರಿಂದ ಯಾರು ಯಾವೆಲ್ಲಾ ಕಾನೂನಾತ್ಮಕ ಅಂಶದ ಮೇಲೆ ವಾದ ಮಂಡಿಸಲಿದ್ದಾರೆ ಎಂಬುದು ತಿಳಿಯುತ್ತದೆ. ಹಾಗೆಯೇ, ದಿನಗಟ್ಟಲೆ-ಗಂಟೆಗಟ್ಟಲೆ ವಾದ ಮಂಡಿಸುವುದನ್ನು ತಪ್ಪಿಸಬಹುದು. ವಾದ ಮಂಡನೆಗೆ ಸಮಯದ ಮಿತಿ ನಿಗದಿಪಡಿಸಬಹುದು. ಹಾಗಾಗಿ, ಸೆ.5ರ ಸೂಚನೆಯಂತೆ ಎಸ್‌ಐಟಿ ಮತ್ತು ಸರಕಾರ ಸೇರಿದಂತೆ ಇತರೆ ವಾದಿಗಳು- ಪ್ರತಿವಾದಿಗಳು ಲಿಖಿತ ವಾದದ ಮುಖ್ಯಾಂಶಗಳನ್ನು ಸಲ್ಲಿಸಬೇಕು. ಆಗ ಪ್ರಕರಣದ ಕಾನಾನೂತ್ಮಕ ಅಂಶ ತಿಳಿಯಲು ಮತ್ತು ತಮ್ಮ ನಿಲುವು ತಿಳಿಸಲು ಅರ್ಜಿದಾರರು ಮತ್ತು ಅಮಿಕಸ್‌ ಕ್ಯೂರಿಗೆ ಸಹಕಾರಿಯಾಗುತ್ತದೆ ಎಂದು ಸೂಚಿಸಿದ ನ್ಯಾಯಪೀಠ, ಅಕ್ಟೋಬರ್‌ ಮೂರನೇ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿತು.

ಮುಂದಿನ ಲೇಖನ