ಆ್ಯಪ್ನಗರ

ರವಿ ಬೆಳಗೆರೆಗೆ ಡಿ.23ರವರೆಗೆ ನ್ಯಾಯಾಂಗ ಬಂಧನ

ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರನ್ನು ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಪ್ರಕರಣ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯ ಖ್ಯಾತ ಪತ್ರಕರ್ತ ರವಿಬೆಳಗೆರೆ ಅವರಿಗೆ ಡಿ.23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Vijaya Karnataka Web 11 Dec 2017, 2:41 pm
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರನ್ನು ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಪ್ರಕರಣ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯ ಖ್ಯಾತ ಪತ್ರಕರ್ತ ರವಿಬೆಳಗೆರೆ ಅವರಿಗೆ ಡಿ.23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Vijaya Karnataka Web ravi belagere in judicial custody till dec 23
ರವಿ ಬೆಳಗೆರೆಗೆ ಡಿ.23ರವರೆಗೆ ನ್ಯಾಯಾಂಗ ಬಂಧನ


ಕಳೆದ ನಾಲ್ಕು ದಿನಗಳಿಂದ ಸಿಸಿಬಿ ವಶದಲ್ಲಿರುವ ರವಿ ಬೆಳಗೆರೆಗೆ ತೀವ್ರತರದ ಆರೋಗ್ಯ ಸಮಸ್ಯೆದೆ, ಹೀಗಾಗಿ, ಅವರಿಗೆ ಜೈಲು ಆಸ್ಪತ್ರೆ ಅಥವಾ ಹೊರಗಿನ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ನ್ಯಾಯಾಲಯಕ್ಕೆ ಮೂರು ಪುಟಗಳ ವೈದ್ಯಕೀಯ ಸ್ಥಿತಿ ಬಗ್ಗೆ ವರದಿ ನೀಡಲಾಗಿದೆ. ಅದರಂತೆ ಸೂಕ್ತ ಚಿಕಿತ್ಸೆ ಕೊಡಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ‌ ನೀಡಿದೆ ಬೆಳಗೆರೆ ಪರ ವಕೀಲ ದಿವಾಕರ್ ಹೇಳಿದ್ದಾರೆ.


ಪ್ರಕರಣ ವಿಚಾರಣೆ ಮಾಹಿತಿ, ಮಾಧ್ಯಮಗಳಲ್ಲಿ ಬಂದ ವರದಿ, ಚರ್ಚೆ, ದೂರುದಾರರ ಹೇಳಿಕೆಗಳು ಹಾಗೂ ರವಿ ಬೆಳಗೆರೆ ಅವರ ಆರೋಗ್ಯ ಸ್ಥಿತಿ ಮುಂತಾದ ಅಂಶಗಳ ಆಧಾರಿಸಿ ಸಮರ್ಥವಾಗಿ ದಾಖಲೆಗಳ ಸಹಿತ ಜಾಮೀನು ಅರ್ಜಿ ಸಲ್ಲಿಸುತ್ತೇವೆ ದಿವಾಕರ್ ಹೇಳಿದರು.

ಒಂದೆರಡು ದಿನಗಳಲ್ಲಿ ಸೆಷೆನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ದಿವಾಕರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ