ಆ್ಯಪ್ನಗರ

ರಿಯಲ್‌ ಎಸ್ಟೇಟ್‌ ಏಜೆಂಟ್‌ ಕೊಲೆ: ಆರೋಪಿಗಳ ಬಂಧನ

ಅನೈತಿಕ ಸಂಬಂಧದ ಹೊಂದಿದ್ದಾನೆ ಎನ್ನುವ ಅನುಮಾನದಿಂದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಒಬ್ಬನನ್ನು ಬೀದಿಗೆ ಎಳೆದು ತಂದು ಕೊಲೆ ಮಾಡಿದ್ದ ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 29 May 2018, 10:04 am
ಬೆಂಗಳೂರು: ಅನೈತಿಕ ಸಂಬಂಧದ ಹೊಂದಿದ್ದಾನೆ ಎನ್ನುವ ಅನುಮಾನದಿಂದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಒಬ್ಬನನ್ನು ಬೀದಿಗೆ ಎಳೆದು ತಂದು ಕೊಲೆ ಮಾಡಿದ್ದ ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web Stabbing


ಮೇ 19ರಂದು ರಿಯಲ್‌ ಎಸ್ಟೇಟ್‌ ಏಜೆಂಟ್‌ ಮತ್ತು ರೌಡಿ ಶೀಟರ್‌ ರಾಕೇಶ್‌ ಅಲಿಯಾಸ್‌ ಜಾಕಿ ಎಂಬಾತನನ್ನು ಆತನ ಕಚೇರಿಯಿಂದ ಹೊರಗೆ ಎಳೆದು ತಂದು ಕೊಲೆ ಮಾಡಲಾಗಿತ್ತು. ಈ ಸಂಬಂಧ ವಸಂತನಗರದ ನಿವಾಸಿ ಪ್ರಕಾಶ್‌, ಯಶವಂತಪುರದ ನಿವಾಸಿಗಳಾದ ದಿನೇಶ್‌, ಅಂಥೋನಿ, ಬ್ಲಾಕಿ ಅನಿಶ್‌, ಆನಂದ್‌ ಮತ್ತು ಸೈಯದ್‌ ಎಂಬುವರನ್ನು ಬಂಧಿಸಿದ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮೈಕೋಲೇಔಟ್‌ ಠಾಣೆಯ ರೌಡಿ ಶೀಟರ್‌ ಆಗಿದ್ದ ರಾಕೇಶ್‌ ತನ್ನ ಸ್ನೇಹಿತ ಪ್ರಕಾಶ್‌ ಎಂಬಾತನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಅನುಮಾನದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತು. ರಾಕೇಶ್‌ನ ಪತ್ನಿ ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ತನ್ನ ಸ್ನೇಹಿತ ಪ್ರಕಾಶ್‌ ಪತ್ನಿ ಜತೆ ಅನುಚಿತ ಸಂಬಂಧ ಹೊಂದಿದ್ದ. ಈ ಬಗ್ಗೆ ಅವರಿಬ್ಬರಿಗೂ ಎಚ್ಚರಿಕೆ ನೀಡಿದ್ದರೂ ಸಂಬಂಧ ಮುಂದುವರಿಸಿದ್ದರು. ಹೀಗಾಗಿ ಪ್ರಕಾಶ್‌ ತನ್ನ ಸ್ನೇಹಿತರ ಜತೆ ಸೇರಿ ರಾಕೇಶ್‌ನನ್ನು ಕೊಲೆ ಮಾಡಿದ್ದಾರೆ. ಆರೋಪಿಗಳು ಕೊಲೆ ಮಾಡುವ ದೃಶ್ಯ ಸಿಸಿಟಿವಿಯೊಂದರಲ್ಲಿ ದಾಖಲಾಗಿತ್ತು. ಅದರ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ