ಆ್ಯಪ್ನಗರ

ಜೈಲಿನಲ್ಲಿ ಶಶಿಕಲಾಗೆ ರಾಜಾತಿಥ್ಯ: ಸತ್ಯನಾರಾಯಣರಾವ್‌ಗೆ ತಾತ್ಕಾಲಿಕ ರಿಲೀಫ್‌

ಜೈಲಿನಲ್ಲಿ ಶಶಿಕಲಾಗೆ ರಾಜಾತಿಥ್ಯ: ಸತ್ಯನಾರಾಯಣರಾವ್‌ ತಾತ್ಕಾಲಿಕ

Vijaya Karnataka Web 10 Apr 2018, 5:10 pm
ಬೆಂಗಳೂರು: ಎಐಡಿಎಂಕೆ ನಾಯಕಿ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲು 2 ಕೋಟಿ ರೂ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
Vijaya Karnataka Web relief for ex dgp sathyanarayana rao
ಜೈಲಿನಲ್ಲಿ ಶಶಿಕಲಾಗೆ ರಾಜಾತಿಥ್ಯ: ಸತ್ಯನಾರಾಯಣರಾವ್‌ಗೆ ತಾತ್ಕಾಲಿಕ ರಿಲೀಫ್‌


ಪ್ರಕರಣದ ಸಂಬಂಧ ರಾವ್ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಎಸಿಬಿ ದಾಖಲಿಸಿರುವ ಎಫ್‌ಐ‌ಆರ್ ರದ್ದು ಕೋರಿ ಸತ್ಯನಾರಾಯಣ ರಾವ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದರು. ಏ.16ರ ಒಳಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಲಾಯಿತು.

ಮುಂದಿನ ವಿಚಾರಣೆಯವರೆಗೂ ಸತ್ಯನಾರಾಯಣರಾವ್ ವಿರುದ್ಧ ವಿಚಾರಣೆಗೆ ಮುಂದಾಗಂತೆ ಸೂಚಿಸಿ, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏ.19ಕ್ಕೆ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ