ಆ್ಯಪ್ನಗರ

ಬೆಂಗಳೂರಲ್ಲಿ ಎಲಿವೇಟೆಡ್ ಕಾರಿಡಾರ್ ವಿರುದ್ಧ ಪ್ರತಿಭಟನೆ

ಬೆಂಗಳೂರಿನಲ್ಲಿ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣ ಯೋಜನೆಯನ್ನು ವಿರೋಧಿಸಿ ಹಲವು ಸಂಘ ಸಂಸ್ಥೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

Vijaya Karnataka Web 16 Mar 2019, 6:05 pm
ಬೆಂಗಳೂರು: ಬೆಂಗಳೂರಿನಲ್ಲಿ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣ ಯೋಜನೆಯನ್ನು ವಿರೋಧಿಸಿ ಹಲವು ಸಂಘ ಸಂಸ್ಥೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್‌, ಯಾವಾಗಲು ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತವೆ. ಬೆಂಗಳೂರು ಉತ್ತರದಿಂದ ಬಂದ ಮಂದಿ ಎಲಿವೇಟೆಡ್‌ ಕಾರಿಡಾರ್‌ ಬೇಕು ಎನ್ನುತ್ತಾರೆ. ಹಾಗೆಯೇ ದಕ್ಷಿಣದಿಂದ ಬಂದ ಮಂದಿ ಎಲಿವೇಟೆಡ್‌ ಕಾರಿಡಾರ್‌ ಬೇಡ ಎನ್ನುತ್ತಾರೆ. ಅವರ ಮನವೊಲಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.


ಪ್ರತಿಭಟನೆ ಸಂದರ್ಭ ಹಿರಿಯ ನಟ ಪ್ರಕಾಶ್ ಬೆಳವಾಡಿ ಮಾತನಾಡಿ, ವಿರೋಧ ಪಕ್ಷ ಕೂಡ ಈ ಯೋಜನೆಯನ್ನು ವಿರೋಧಿಸುತ್ತಿಲ್ಲ. ಮುಂದೆ ಅವರಿಗೂ ಲಾಭವಾಗುತ್ತದೆಂಬ ಲೆಕ್ಕಾಚಾರ ಇದರಲ್ಲಿ ಅಡಗಿದೆ. ಮಾಲಿನ್ಯ ನಿಯಂತ್ರಣ, ಅರಣ್ಯ ಬೆಳೆಸುವ ಯೋಜನೆಗಳಿಗೆ ಒತ್ತು ನೀಡುವುದಿಲ್ಲ. ಏಕೆಂದರೆ ಅದರಿಂದ ಹಣ ಗಳಿಸಲು ಸಾಧ್ಯವಿಲ್ಲ ಎಂದು ದೂರಿದರು.

ಕಾತ್ಯಾಯಿನಿ ಚಾಮರಾಜ್ ಮಾತನಾಡಿ, ನಗರದಲ್ಲಿ ೭೫ ಲಕ್ಷ ವಾಹನಗಳು ಸಂಚರಿಸುತ್ತಿವೆ. ಇದನ್ನು ನಿಯಂತ್ರಣ ಕ್ಕೆ ತರಲು ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು. ಎಲಿವೇಟೆಡ್ ಕಾರಿಡಾರ್ ನಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದರು‌ .



ಸಿಟಿಜನ್ ಫಾರ್ ಬೆಂಗಳೂರು, ವೈಟ್ ಫೀಲ್ಡ್ ರೈಸಿಂಗ್, ಬೆಂಗಳೂರು ಅಪಾರ್ಟ್ ಮೆಂಟ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ