ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ
ರೆಸ್ಟೋರೆಂಟ್ನಲ್ಲಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರನ್ನು ಮಾರ್ಗ ಮಧ್ಯೆ ಅಡ್ಡ ಹಾಕಿದ ದುಷ್ಕರ್ಮಿಗಳು ಮರದ ರೀಪೀಸ್ನಿಂದ ಹಲ್ಲೆ ನಡೆಸಿ ನಗದು ಕಿತ್ತುಕೊಂಡು ಹೋಗಿರುವ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka 11 Sep 2018, 5:00 am
ಬೆಂಗಳೂರು: ರೆಸ್ಟೋರೆಂಟ್ನಲ್ಲಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರನ್ನು ಮಾರ್ಗ ಮಧ್ಯೆ ಅಡ್ಡ ಹಾಕಿದ ದುಷ್ಕರ್ಮಿಗಳು ಮರದ ರೀಪೀಸ್ನಿಂದ ಹಲ್ಲೆ ನಡೆಸಿ ನಗದು ಕಿತ್ತುಕೊಂಡು ಹೋಗಿರುವ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗರಬಾವಿ ನಿವಾಸಿಗಳಾದ ಹರ್ಷವರ್ಧನ್ ಮತ್ತು ಬಾನು ದರೋಡೆಗೆ ಒಳಗಾದವರು. ಬೈಕ್ನಲ್ಲಿ ಹಿಂದೆ ಕುಳಿತಿದ್ದ ಬಾನು ತಲೆಗೆ ಹಲ್ಲೆ ಮಾಡಿ ದರೋಡೆ ನಡೆಸಿದ್ದಾಗಿ ತಿಳಿದು ಬಂದಿದೆ. ರಾತ್ರಿ 12 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದ್ದು ಹರ್ಷವರ್ಧನ್ ಚಲಾಯಿಸುತ್ತಿದ್ದ ಬೈಕನ್ನು ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಾಗರಬಾವಿ ವೃತ್ತದ ವಿನಾಯಕ ಲೇಔಟ್ ಬಳಿ ಅಡ್ಡಗಟ್ಟಿದ್ದರು. ಬೈಕ್ ನಿಲ್ಲಿಸುತ್ತಿದ್ದಂತೆ ಏಕಾಏಕಿ ಮರದ ರಿಪೀಸ್ನಿಂದ ಹಲ್ಲೆ ನಡೆಸಿ ಭಯ ಹುಟ್ಟಿಸಿ ಅವರ ಬಳಿ ಇದ್ದ 3000 ರೂ. ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ನಾಗರಬಾವಿ ನಿವಾಸಿಗಳಾದ ಹರ್ಷವರ್ಧನ್ ಮತ್ತು ಬಾನು ದರೋಡೆಗೆ ಒಳಗಾದವರು. ಬೈಕ್ನಲ್ಲಿ ಹಿಂದೆ ಕುಳಿತಿದ್ದ ಬಾನು ತಲೆಗೆ ಹಲ್ಲೆ ಮಾಡಿ ದರೋಡೆ ನಡೆಸಿದ್ದಾಗಿ ತಿಳಿದು ಬಂದಿದೆ. ರಾತ್ರಿ 12 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದ್ದು ಹರ್ಷವರ್ಧನ್ ಚಲಾಯಿಸುತ್ತಿದ್ದ ಬೈಕನ್ನು ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಾಗರಬಾವಿ ವೃತ್ತದ ವಿನಾಯಕ ಲೇಔಟ್ ಬಳಿ ಅಡ್ಡಗಟ್ಟಿದ್ದರು. ಬೈಕ್ ನಿಲ್ಲಿಸುತ್ತಿದ್ದಂತೆ ಏಕಾಏಕಿ ಮರದ ರಿಪೀಸ್ನಿಂದ ಹಲ್ಲೆ ನಡೆಸಿ ಭಯ ಹುಟ್ಟಿಸಿ ಅವರ ಬಳಿ ಇದ್ದ 3000 ರೂ. ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.