ಆ್ಯಪ್ನಗರ

ರೌಡಿ ಪರೇಡ್‌

ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ಮತ್ತು ವಿವಿ ಪುರ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಭಾನುವಾರ ರೌಡಿ ಪರೇಡ್‌ ನಡೆಸಿದ್ದು, 120ಕ್ಕೂ ಹೆಚ್ಚು ಮಂದಿ ರೌಡಿಗಳಿಗೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

Vijaya Karnataka 15 Oct 2018, 5:00 am
ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ಮತ್ತು ವಿವಿ ಪುರ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಭಾನುವಾರ ರೌಡಿ ಪರೇಡ್‌ ನಡೆಸಿದ್ದು, 120ಕ್ಕೂ ಹೆಚ್ಚು ಮಂದಿ ರೌಡಿಗಳಿಗೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web rowdy parade counselling
ರೌಡಿ ಪರೇಡ್‌


ರೌಡಿಗಳ ಹಿನ್ನೆಲೆ ಬಗ್ಗೆ ಇತ್ತೀಚಿನ ಮಾಹಿತಿ ಸಂಗ್ರಹಿಸಿ, ಅವರು ಎಲ್ಲಿ ಕೆಲಸ ಮಾಡಿಕೊಂಡಿದ್ದಾರೆ, ಎಷ್ಟು ಪ್ರಕರಣಗಳು ಬಾಕಿ ಇವೆ ಎನ್ನುವ ಬಗ್ಗೆಯೂ ಮಾಹಿತಿಯನ್ನೂ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಅದೇ ರೀತಿ ಹೊಸದಾಗಿ ರೌಡಿ ಪಟ್ಟಿಗೆ ಸೇರಿದರೂ ಪರೇಡ್‌ನಲ್ಲಿ ಹಾಜರಿದ್ದರು. ಅವರ ಪೋಷಕರಿಗೂ ತಿಳಿವಳಿಕೆ ನೀಡಿ ಮಕ್ಕಳ ಬಗ್ಗೆ ಗಮನಹರಿಸುವಂತೆ ಸೂಚಿಸಿದರು.

ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಉತ್ತಮ ರೀತಿಯಲ್ಲಿ ಬದುಕುವುದಾದರೆ ಕಾನೂನಿನ ನೆರವು ಒದಗಿಸಲಾಗುವುದು. ಅಪರಾಧ ಪ್ರಕರಣಗಳನ್ನು ಇಳಿಸುವ ಮೂಲಕ ಸಮಾಜದಲ್ಲಿ ನೆಮ್ಮದಿ ಇರುವಂತೆ ನೋಡಿಕೊಳ್ಳಬೇಕು. ಮಾಡಿದ ತಪ್ಪನ್ನು ಪದೇಪದೆ ಮಾಡಿದರೆ ಕಾನೂನಿನ ಮೂಲಕ ಪಾಠ ಕಲಿಸಬೇಕಾಗುತ್ತದೆ,'' ಎಂದು ಪೊಲೀಸರು ಬುದ್ಧಿವಾದ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ