ಆ್ಯಪ್ನಗರ

100ಕ್ಕೂ ಹೆಚ್ಚು ರೌಡಿಗಳ ಪರೇಡ್‌

ಪಶ್ಚಿಮ ವಿಭಾಗದ ಚಿಕ್ಕಪೇಟೆ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಭಾನುವಾರ ಬೆಳ್ಳಂಬೆಳಗ್ಗೆ 100ಕ್ಕೂ ಹೆಚ್ಚು ರೌಡಿಗಳ ಪರೇಡ್‌ ನಡೆಸಿ, ಎಚ್ಚರಿಕೆ ನೀಡಿದ್ದಾರೆ.

ವಿಕ ಸುದ್ದಿಲೋಕ 4 Apr 2016, 4:20 am
ಬೆಂಗಳೂರು: ಪಶ್ಚಿಮ ವಿಭಾಗದ ಚಿಕ್ಕಪೇಟೆ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಭಾನುವಾರ ಬೆಳ್ಳಂಬೆಳಗ್ಗೆ 100ಕ್ಕೂ ಹೆಚ್ಚು ರೌಡಿಗಳ ಪರೇಡ್‌ ನಡೆಸಿ, ಎಚ್ಚರಿಕೆ ನೀಡಿದ್ದಾರೆ.
Vijaya Karnataka Web rowdy parade more than 100
100ಕ್ಕೂ ಹೆಚ್ಚು ರೌಡಿಗಳ ಪರೇಡ್‌


ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್‌ ಆಯುಕ್ತ ಚರಣ್‌ರೆಡ್ಡಿ ನೇತೃತ್ವದಲ್ಲಿ ರೌಡಿಗಳ ಮನೆ ಮೇಲೆ ದಾಳಿ ಮಾಡಿ, ನಂತರ ಅವರನ್ನು ಮೈಸೂರು ರಸ್ತೆಯಲ್ಲಿರುವ ಸಿಎಆರ್‌ ಮೈದಾನದಲ್ಲಿ ಸೇರಿಸಿ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದರು.

ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಲ್ಲಿ ಮಾಹಿತಿ ನೀಡುವಂತೆ ಹಾಗೂ ಎಲ್ಲಾ ಅಪರಾಧ ಚಟುವಟಿಕೆ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮತ್ತೊಮ್ಮೆ ಸೂಚಿಸಿದರು.

ನಗರದಲ್ಲಿ ರೌಡಿಗಳ ಹತ್ಯೆ, ದರೋಡೆ, ಗ್ಯಾಂಗ್‌ ವಾರ್‌ಗಳು, ಸರಗಳ್ಳತನ ಪ್ರಕರಣ ಹೆಚ್ಚಾಗುತ್ತಿವೆ. ಹಾಗಾಗಿ, ಯಾರಾದರೂ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದರೆ ಅದನ್ನು ಕೈಬಿಡಬೇಕು ಎಂದು ಎಚ್ಚರಿಸಿದರು.

ಆ ರೌಡಿಗಳ ಗ್ಯಾಂಗ್‌ ಕಟ್ಟಿದ್ದಾರೆಯೇ, ಜೈಲಿನಿಂದ ಹೊರಬಂದ ಹಳೇ ರೌಡಿಗಳು ಯಾವ ಕೆಲಸ ಮಾಡುತ್ತಿದ್ದಾರೆ. ಯಾವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ, ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬಿತ್ಯಾದಿ ಮಾಹಿತಿಯನ್ನು ಅವರಿಂದಲೇ ಪಡೆದುಕೊಳ್ಳಲಾಯಿತು.

ತಮ್ಮ ಬಡಾವಣೆಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ ನೀಡಿದರು. ನಗರದಲ್ಲಿ ಸರಗಳ್ಳತನ, ದರೋಡೆ, ಕೊಲೆ ಸೇರಿದಂತೆ ದೊಡ್ಡ ಪ್ರಮಾಣದ ಕೃತ್ಯಗಳು ಹೆಚ್ಚಾಗುತ್ತಿವೆ. ಇಂತಹ ಕೃತ್ಯಗಳನ್ನು ಯಾರು ಮಾಡುತ್ತಿದ್ದಾರೆ ಎಂಬ ಬಗ್ಗೆ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡುಬೇಕು. ಇಲ್ಲವಾದಲ್ಲಿ ಆ ಘಟನೆಗೆ ನೀವೇ ಹೊಣೆ ಆಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

ಇತ್ತಿಚೇಗೆ ನಗರದಲ್ಲಿ ಪುಡಿ ರೌಡಿಗಳ ತಂಡಗಳು ಹೆಚ್ಚುತ್ತಿವೆ. ಇಂತಹ ತಂಡಗಳಿಗೆ ಹಳೇ ರೌಡಿಗಳು ಬಾಹ್ಯ ಬೆಂಬಲ ಕೊಡುತ್ತಿರುವ ಬಗ್ಗೆ ಮಾಹಿತಿ ಇದೆ. ಪೊಲೀಸರ ಮುಂದೆ ಬದಲಾವಣೆಗೆ ತಲೆ ಅಲ್ಲಾಡಿಸುವ ರೌಡಿಗಳು ಮತ್ತೆ ತಮ್ಮ ಹಳೆ ಚಟುವಟಿಕೆ ಮುಂದುವರಿಸುತ್ತಿದ್ದು, ತಮ್ಮ ಬಡಾವಣೆಯ ಪುಡಿ ರೌಡಿಗಳು ಅಪರಾಧ ಕೃತ್ಯ ಎಸಗಲು ಬೆಂಬಲ ನೀಡುತ್ತಿರುವುದು ಸರಿಯಲ್ಲ. ಅಂತಹವರು ಈ ಕೂಡಲೇ ಅದನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮತ್ತೊಮ್ಮೆ ಜೈಲಿಗೆ ಕಳುಹಿಸುವುದಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಿಟಿ ಮಾರುಕಟ್ಟೆ, ಕಾಟನ್‌ಪೇಟೆ, ಕಲಾಸಿಪಾಳ್ಯ, ಉಪ್ಪಾರಪೇಟೆ ಠಾಣೆಗಳ ಹಾಲಿ ಹಾಗೂ ಮಾಜಿ ರೌಡಿಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು. ಸ್ಥಳೀಯ ಎಸಿಪಿ ಸೇರಿದಂತೆ ಐದು ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದು, ರೌಡಿಗಳ ದಾಖಲೆಗಳನ್ನು ಪರಿಶೀಲಿಸಿದರು. ಜೈಲಿನಿಂದ ಬಂದ ನಂತರವೂ ಮತ್ತೆ ಅಪರಾಧ, ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿರುವ ರೌಡಿಗಳಿಗೆ ಮತ್ತೆ ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ