ಆ್ಯಪ್ನಗರ

ಆರ್‌ಆರ್‌ ನಗರ: 50-60 ಕೋಟಿ ರೂ.ಗೆ ಮುನಿರತ್ನ ಮಾರಾಟವಾಗಿದ್ದಾರೆ ಎಂದು ಕೃಷ್ಣಮೂರ್ತಿ ಕಿಡಿ

ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳ ನಡುವೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ ಎಂದು ಜೆಡಿಎಸ್‌ ಅಭ್ಯರ್ಥಿ ವಿ ಕೃಷ್ಣಮೂರ್ತಿ ಮುನಿರತ್ನ ವಿರುದ್ಧ ಕಿಡಿಕಾರಿದ್ದಾರೆ.

Vijaya Karnataka Web 20 Oct 2020, 12:27 am
ಬೆಂಗಳೂರು: ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಅವರಿಗೆ ಜನರ ಬಳಿ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಕಿಡಿಕಾರಿದ್ದಾರೆ.
Vijaya Karnataka Web rr nagar by election munirathna sold for 50 60 crores for bjp alleges v krishnamurthy
ಆರ್‌ಆರ್‌ ನಗರ: 50-60 ಕೋಟಿ ರೂ.ಗೆ ಮುನಿರತ್ನ ಮಾರಾಟವಾಗಿದ್ದಾರೆ ಎಂದು ಕೃಷ್ಣಮೂರ್ತಿ ಕಿಡಿ


ಯಶವಂತಪುರ ವಾರ್ಡ್‌ನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳಲು ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಉಪಚುನಾವಣೆ ಸಮಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲ ಪ್ರಯತ್ನ ನಡೆಸುತ್ತಿವೆ. ನಾವೂ ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕಾರ್ಯಕರ್ತರಿಗೆ ವಿ.ಕೃಷ್ಣಮೂರ್ತಿ ಕರೆ ನೀಡಿದರು.

ಸೋಮವಾರ ಬೆಳಗ್ಗೆ ಮತ್ತಿಕೆರೆಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ, ಯಶವಂತಪುರ, ಬಿಇಎಂಎಲ್‌ ಬಡಾವಣೆ, ಐಟಿಐ ಲೇಔಟ್‌, ಜ್ಞಾನಭಾರತಿ, ಶ್ರೀನಿವಾಸನಗರ ವಾರ್ಡ್‌ನಲ್ಲಿ ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷರಾದ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರು ಇದ್ದರು.

ದೇವೇಗೌಡರ ಕುಟುಂಬವನ್ನು ಖರೀದಿಸಲು ಆಗಲ್ಲ: ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ನವೆಂಬರ್‌ 3 ರಂದು ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮುನಿರತ್ನ ಹಾಗೂ ಕಾಂಗ್ರೆಸ್‌ನಿಂದ ಕುಸುಮಾ ಎಚ್‌. ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ಇದೆ ಎಂದು ಹೇಳಲಾಗುತ್ತಿದ್ದರು, ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದೆ.

ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಎಂದಿರುವುದೇ ಮೋದಿ ದೊಡ್ಡ ಸಾಧನೆ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ