ಆ್ಯಪ್ನಗರ

ಪರಪ್ಪನ ಅಗ್ರಹಾರದಲ್ಲಿ ಎನ್‌ಐಎ ಅಧಿಕಾರಿಗಳಿಂದ ಸಂಪತ್‌ರಾಜ್‌ ವಿಚಾರಣೆ

ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ದಾಖಲಿಸಿಕೊಂಡಿರುವ ಎರಡು ಪ್ರಕರಣಗಳ ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಜೈಲಿನಲ್ಲಿ ಸಂಪತ್‌ರಾಜ್‌ ವಿಚಾರಣೆಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದರು. ಮಂಗಳವಾರ ಕೂಡ ಸಂಪತ್‌ರಾಜ್‌ರನ್ನು ವಿಚಾರಣೆ ನಡೆಸಲಾಗುತ್ತದೆ.

Vijaya Karnataka Web 24 Nov 2020, 6:40 am
ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್‌ ಸಂಪತ್‌ರಾಜ್‌ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣೆಗೆ ಒಳಪಡಿಸಿದರು.
Vijaya Karnataka Web Sampath Raj
Sampath Raj


ಗಲಭೆ ಸಂಬಂಧ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ದಾಖಲಿಸಿಕೊಂಡಿರುವ ಎರಡು ಪ್ರಕರಣಗಳ ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಜೈಲಿನಲ್ಲಿ ಸಂಪತ್‌ರಾಜ್‌ ವಿಚಾರಣೆಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದರು. ಮಂಗಳವಾರ ಕೂಡ ಸಂಪತ್‌ರಾಜ್‌ರನ್ನು ವಿಚಾರಣೆ ನಡೆಸಲಾಗುತ್ತದೆ.

ಬೆಂಗಳೂರು: ಬಿಬಿಎಂಪಿ ಯೋಜನೆಗೆ ಇನ್ಮುಂದೆ ರಾಜಕಾರಣಿಗಳ ಫೋಟೊ ಹಾಕಿದರೆ ಕ್ರಿಮಿನಲ್‌ ಕೇಸ್!

ಮುಸ್ಲಿಂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್‌ ಮಾಡಿದ್ದಾನೆಂದು ಆರೋಪಿಸಿ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿಯಾಗಿರುವ ನವೀನ್‌ ವಿರುದ್ಧ ಸ್ಥಳೀಯರು ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ತನ್ನ ರಾಜಕೀಯ ದ್ವೇಷಕ್ಕಾಗಿ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಕೆಟ್ಟ ಹೆಸರು ತರಲು ತನ್ನ ಸಹಚರರ ಜತೆ ಸೇರಿ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಸಂಪತ್‌ರಾಜ್‌ ಮೇಲಿದೆ.

ರಂಗಾಸಕ್ತರಿಗೆ ಸಿಹಿಸುದ್ದಿ; ಬೆಂಗಳೂರಿನಲ್ಲಿ ಇಂದಿನಿಂದ ನ.26ರವರೆಗೆ 'ಶಂಕರ್‌ನಾಗ್‌ ನಾಟಕೋತ್ಸವ’ ಹಬ್ಬ

ಘಟನೆಯ ಕುರಿತು ಐಎನ್‌ಐ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ. ಕಳೆದ ವಾರವಷ್ಟೇ ಸಿಸಿಬಿ ಅಧಿಕಾರಿಗಳು ಸಂಪತ್‌ರಾಜ್‌ ಅವರನ್ನು ಬಂಧಿಸಿದ್ದರು. ಆದರೆ, ಪ್ರಕರಣದ ಕುರಿತು ಮಾಹಿತಿ ನೀಡದೆ ವಿಚಾರಣೆಗೆ ಅಸಹಕಾರ ತೋರಿದ್ದರು. ಗಲಭೆ ಪ್ರಕರಣದಲ್ಲಿ ಸಂಪತ್‌ರಾಜ್‌ ಪಾತ್ರ ಕಂಡು ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ