ಆ್ಯಪ್ನಗರ

ಶಶಿಕಲಾಗೆ ರಾಜಾತಿಥ್ಯ ನೀಡಲು ಸೂಚಿಸಿಲ್ಲ: ಸಿಎಂ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ಅವರಿಗೆ ಅಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಯವರಿಗೆ ತಾವು ಸೂಚನೆ ನೀಡಿರಲಿಲ್ಲ .

Vijaya Karnataka Web 7 Mar 2018, 12:08 pm
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ಅವರಿಗೆ ಅಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಯವರಿಗೆ ತಾವು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Vijaya Karnataka Web sasikala in parappana agrahara jail
ಶಶಿಕಲಾಗೆ ರಾಜಾತಿಥ್ಯ ನೀಡಲು ಸೂಚಿಸಿಲ್ಲ: ಸಿಎಂ


ಮುಖ್ಯಮಂತ್ರಿಯ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ ಮತ್ತು ದಿಂಬು ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಸಿಎಂ ತಿಳಿಸಿದ್ದಾರೆ.

ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ಮೂಲ ಸೌಕರ್ಯಗಳನ್ನೂ ಒದಗಿಸಿಲ್ಲ ಎಂದು ತಮಿಳುನಾಡಿನ ಒಂದು ನಿಯೋಗ ತಮ್ಮ ಕಚೇರಿಗೆ ಬಂದು ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ರೀತಿ ಹಾಗೂ ಜೈಲಿನ ನಿಯಮಗಳ ಪ್ರಕಾರ ಒದಗಿಸಬೇಕಾದ ಸೌಲಭ್ಯಗಳನ್ನು ಶಶಿಕಲಾ ಅವರಿಗೆ ಕೊಡುವಂತೆ ಸತ್ಯನಾರಾಯಣರಾವ್ ಅವರಿಗೆ ಸೂಚಿಸಲಾಗಿತ್ತು. ಆದರೆ, ರಾಜಾತಿಥ್ಯ ಒದಗಿಸುವಂತೆ ಹೇಳಿರಲಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ತನಿಖೆಯನ್ನು ಎಸಿಬಿಗೆ ವಹಿಸಲಾಗಿದೆ. ಹೀಗಾಗಿ ಸತ್ಯನಾರಾಯಣರಾವ್ ಅವರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಸತ್ಯನಾರಾಯಣರಾವ್‌ ಹೈಕೋರ್ಟ್‌ ಮೊರೆ

ಜೈಲಿನಲ್ಲಿ ಶಶಿಕಲಾ ನಟರಾಜನ್‌ಗೆ ವಿವಿಐಪಿ ಸೌಲಭ್ಯ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಎಸಿಬಿಗೆ ವಹಿಸಿರುವುದನ್ನು ಪ್ರಶ್ನಿಸಿ ನಿವೃತ್ತ ಐಪಿಎಸ್‌ ಅಧಿಕಾರಿ ಎಚ್‌.ಎನ್‌ ಸತ್ಯನಾರಾಯಣರಾವ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ