ಆ್ಯಪ್ನಗರ

ದಟ್ಟ ಹೊಗೆಗೆ ಉಸಿರುಗಟ್ಟಿ 15 ಮೇಕೆಗಳ ಸಾವು

ಶಾರ್ಟ್‌ ಸರ್ಕೀಟ್‌ನಿಂದಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಾಣಿಸಿಕೊಂಡ ಹೊಗೆಯಿಂದ 15 ಮೇಕೆಗಳು ಸಾವಿಗೀಡಾಗಿರುವ ದಾರುಣ ಘಟನೆ ವಸಂತಪುರದಲ್ಲಿ ನಡೆದಿದೆ.

Vijaya Karnataka 9 Jan 2019, 5:00 am
ಬೆಂಗಳೂರು : ಶಾರ್ಟ್‌ ಸರ್ಕೀಟ್‌ನಿಂದಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಾಣಿಸಿಕೊಂಡ ಹೊಗೆಯಿಂದ 15 ಮೇಕೆಗಳು ಸಾವಿಗೀಡಾಗಿರುವ ದಾರುಣ ಘಟನೆ ವಸಂತಪುರದಲ್ಲಿ ನಡೆದಿದೆ.
Vijaya Karnataka Web short circuit 15 goat death
ದಟ್ಟ ಹೊಗೆಗೆ ಉಸಿರುಗಟ್ಟಿ 15 ಮೇಕೆಗಳ ಸಾವು


ಜಯರಾಂ ಎನ್ನುವವರು ಮನೆ ಸಮೀಪವೇ ದಿನಸಿ ಅಂಗಡಿ ಇಟ್ಟುಕೊಂಡಿದ್ದು, ಈ ಅಂಗಡಿಗೆ ಹೊಂದಿಕೊಂಡಂತೆ ಮೇಕೆ ಸಾಕಲು ಶೆಡ್‌ ಕಟ್ಟಿದ್ದರು. ಸೋಮವಾರ ರಾತ್ರಿ ದಿನಸಿ ಅಂಗಡಿಯಲ್ಲಿ ಶಾರ್ಟ್‌ ಸರ್ಕೀಟ್‌ ಆಗಿದ್ದರಿಂದ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿತ್ತು. ಈ ಹೊಗೆ ಅಂಗಡಿಗೆ ಹೊಂದಿಕೊಂಡಿದ್ದ ಶೆಡ್‌ಗೂ ಹರಡಿ ಅಲ್ಲಿದ್ದ ಮೇಕೆಗಳು ಉಸಿರುಗಟ್ಟಿ ಮೃತಪಟ್ಟಿವೆ.

ಹೊಗೆ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಪೊಲೀಸ್‌ ನಿಯಂತ್ರಣ ಕೊಠಡಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸುವಷ್ಟರಲ್ಲಿ ಮೇಕೆಗಳು ಮೃತಪಟ್ಟಿದ್ದವು. ಈ ಬಗ್ಗೆ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ