ಆ್ಯಪ್ನಗರ

ಇಂದಿರಾ ಕ್ಯಾಂಟೀನ್‌ ಉಚಿತ ಊಟಕ್ಕೆ ಬ್ರೇಕ್‌, ಸಿದ್ದರಾಮಯ್ಯ ಅಸಮಧಾನ

ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಕರೆಯಲಾಗಿದ್ದ ಸಭೆಯಲ್ಲಿಯೂ ಬೆಂಗಳೂರಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ನಿಲ್ಲಿಸಿದ್ದರ ಸಂಬಂಧ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು.

Vijaya Karnataka 4 Apr 2020, 8:29 pm

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿಇಂದಿರಾ ಕ್ಯಾಂಟೀನ್‌ಗಳಲ್ಲಿ ಬಡವರಿಗೆ ಉಚಿತ ಆಹಾರ ವಿತರಣೆಗೆ ಬ್ರೇಕ್‌ ಹಾಕಿದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.
Vijaya Karnataka Web Indira Canteen


ಈ ಸಂಬಂಧ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, "ದುಡಿಮೆ ಇಲ್ಲದೆ, ಕೈಯಲ್ಲಿ ಕಾಸಿಲ್ಲದ ಈ ಕೆಟ್ಟ ಪರಿಸ್ಥಿತಿಯಲ್ಲಿ ಈ ಕ್ಯಾಂಟೀನ್‌ಗಳಲ್ಲಿ ನೀಡುವ ಊಟ, ತಿಂಡಿಗೆ ದರ ನಿಗದಿ ಮಾಡಿರುವುದು ತೀರಾ ಅಮಾನವೀಯ. ದುರುಪಯೋಗವಾಗುತ್ತಿದ್ದರೆ ಅದನ್ನು ತಡೆಯಬೇಕೇ ಹೊರತು ಉಚಿತವಾಗಿ ಊಟ, ತಿಂಡಿ ನೀಡುವುದನ್ನು ನಿಲ್ಲಿಸುವುದು ಸರಿಯಲ್ಲ,” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಈ ಕೂಡಲೇ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳನ್ನು ಸಮರ್ಥವಾಗಿ ಬಳಸಿಕೊಂಡು ಕೊರೊನಾ ಸಮಸ್ಯೆ ಕಡಿಮೆ ಆಗುವವರೆಗೆ ಉಚಿತವಾಗಿ ಊಟ, ತಿಂಡಿ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ಲಾಕ್‌ಡೌನ್‌ನಿಂದ ಹಸಿದವರ ಹೊಟ್ಟೆ ತುಂಬಿಸುತ್ತಿದೆ 'ಎಚ್‌ಡಿಕೆ ಜನತಾ ದಾಸೋಹ'

ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲೂ ಪ್ರಸ್ತಾಪ

ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬೆಂಗಳೂರಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರೂ ಈ ಸಂಬಂಧ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೊರೊನಾ ಲಾಕ್‌ಡೌನ್‌ನ ಪರಿಣಾಮ ನೇರವಾಗಿ ದಿನಗೂಲಿ ನೌಕರರ ಮೇಲೆ ಬಿದ್ದಿದೆ. ಒಂದೊತ್ತಿನ ಊಟಕ್ಕೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲೇ ಉಚಿತ ಊಟ ಬಂದ್‌ ಮಾಡಿ, ಮುಂಚಿನಂತೆ ಹಣ ಕೊಟ್ಟು ಊಟ ಮಾಡಿ ಎಂಬುದು ಸರಿಯೇ? ಸರಕಾರದ ಈ ನಿರ್ಧಾರ ಎಷ್ಟು ಸರಿ ಎಂದು ಪ್ರತಿಪಕ್ಷಗಳ ಶಾಸಕರು ಪ್ರಶ್ನಿಸಿದರು.

ಬಡ ಕಾರ್ಮಿಕರ ಹಸಿವು ನಿವಾರಣೆಗೆ 'ದಾಸೋಹ ಕಂಟ್ರೋಲ್‌ ರೂಂ'

ಶಾಸಕರನ್ನು ಸಮಾಧಾನಪಡಿಸಿದ ಸಿಎಂ, ‘‘ಈಗಾಗಲೇ ಅಗತ್ಯವಿರುವ ಎಲ್ಲಾ ಜನರಿಗೆ ಆಹಾರ ಸಾಮಗ್ರಿ ವಿತರಣೆ ನಡೆದಿದೆ. ದಾಸೋಹ ಕಂಟ್ರೋಲ್‌ ರೂಂ ಸ್ಥಾಪಿಸಲಾಗಿದೆ. ಜತೆಗೆ, ಜನರು ಗುಂಪುಗೂಡಿ ಸೋಂಕು ಹರಡಬಾರದು ಎಂಬ ಕಾರಣಕ್ಕೆ ಈ ಆದೇಶ ಮಾಡಲಾಗಿದೆ. ಆದರೂ ಮುಂದೆ ಈ ಬಗ್ಗೆ ಪರಿಶೀಲಿಸಲಾಗುವುದು’’ ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ