ಬೆಂಗಳೂರು : ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರು ಶೀಘ್ರವೇ ಮೆಮು ರೈಲುಗಳ ಮೂಲಕ ಪ್ರಯಾಣಿಸಬಹುದಾಗಿದೆ. ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ಆಯುಕ್ತರಾದ ಅಭಿಕುಮಾರ್ ರೈ, ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ 45 ಕಿ.ಮೀ ವಿದ್ಯುದ್ದೀಕರಣಗೊಂಡ ಮಾರ್ಗವನ್ನು ಪರಿಶೀಲನೆ ನಡೆಸಿದ್ದಾರೆ. ಗಂಟೆಗೆ 100 ಕಿ.ಮೀ ವೇಗದಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ನೈಋುತ್ಯ ರೈಲ್ವೆ ಹೇಳಿದೆ. ಶೀಘ್ರವೇ ಈ ಮಾರ್ಗದಲ್ಲಿ ಮೆಮು ರೈಲುಗಳ ಸಂಚಾರಕ್ಕೆ ಅನುಮತಿ ಸಿಗಲಿದೆ.
ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣದಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ಮೆಮು ರೈಲು ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.
ಮೈಸೂರು- ಬೆಂಗಳೂರು ಮೆಮು ರೈಲು ವಿಸ್ತೃತ ಸೇವೆಗೆ ಚಾಲನೆ
ರೈಲ್ವೆ ಹಾಲ್ಟ್ ಸ್ಟೇಷನ್ ನಿರ್ಮಾಣ:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ ಬಿಐಎಲ್ ವಿಮಾನ ನಿಲ್ದಾಣ ಸಮೀಪವೇ ರೈಲ್ವೆ ಹಾಲ್ಟ್ ಸ್ಟೇಷನ್ ನಿರ್ಮಾಣ ಮಾಡಿದೆ. ಈ ಹಿಂದೆ ಬೆಂಗಳೂರು ನಗರದಿಂದ ಹಾಲ್ಟ್ ಸ್ಟೇಷನ್ಗೆ ರೈಲು ಸಂಚಾರ ಆರಂಭಿಸಲಾಗಿತ್ತು. ಆದರೆ ಪ್ರಯಾಣಿಕರ ನೀರಸ ಪ್ರತಿಕ್ರಿಯೆ ಕಾರಣ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಬಿಐಎಎಲ್ ವಿಮಾನ ನಿಲ್ದಾಣದಿಂದ 3.5 ಕಿ.ಮೀ ದೂರದ ಲ್ಲಿಏರ್ಪೋರ್ಟ್ ರೈಲ್ವೆ ಹಾಲ್ಟ್ ಸ್ಟೇಷನ್ ಅನ್ನು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಸುಮಾರು 28,000 ಉದ್ಯೋಗಿಗಳಿಗೂ ಇದು ಸಹಾಯಕವಾಗಲಿದೆ.
ಈ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಆದರೆ ಅಪಾರ ನಿರೀಕ್ಷೆಯೊಂದಿಗೆ ಆರಂಭಿಸಿದ್ದ ವಿಮಾನ ನಿಲ್ದಾಣದ ರೈಲು ಸೇವೆಗೆ ನೀರಸ ಪ್ರತಿಕ್ರಿಯೆ ದೊರೆಯಿತು. ಕೋವಿಡ್ ಲಾಕ್ಡೌನ್ ಘೋಷಣೆಯಾಗುತ್ತಲೇ ರೈಲು ಸೇವೆ ಸಹ ಸ್ಥಗಿತಗೊಳಿಸಲಾಯಿತು.
ಯಲಹಂಕ-ಪೆನುಗೊಂಡ ನಡುವೆ ಮೆಮು ರೈಲುಗಳ ಸಂಚಾರ 27 ದಿನಗಳ ಕಾಲ ಸ್ಥಗಿತ
ವಿದ್ಯುದ್ದೀಕರಣ ಬಹುತೇಕ ಪೂರ್ಣ, ವೆಚ್ಚ ಇಳಿಕೆಗೆ ಸಹಕಾರಿ, ಪ್ರಯಾಣದ ಸಮಯ ಇಳಿಕೆ ಸಾಧ್ಯ!
ಪರಿಸರ ಸ್ನೇಹಿ ಉಪಕ್ರಮದ ಭಾಗವಾಗಿ ನೈಋುತ್ಯ ರೈಲ್ವೆಯು ಬೆಂಗಳೂರು ವಿಭಾಗದ ಪ್ರಮುಖ ಮಾರ್ಗಗಳ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದೆ.
'' ಚಿಕ್ಕಬಾಣಾವರ-ಹಾಸನ ಮತ್ತು ಚಿಕ್ಕಬಳ್ಳಾಪುರ-ಬಂಗಾರಪೇಟೆ ಎರಡು ಮಾರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಮಾರ್ಗಗಳ ವಿದ್ಯುದೀಕರಣವನ್ನು ಪೂರ್ಣಗೊಳಿಸಿದ್ದೇವೆ,'' ಎಂದು ನೈಋುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಹೇಳಿದರು.
''ಡೀಸೆಲ್ ಬೆಲೆಗಳಿಗೆ ಹೋಲಿಸಿದರೆ ವಿದ್ಯುತ್ ವೆಚ್ಚವು ಕಡಿಮೆ ಇರುವುದರಿಂದ ಮಾರ್ಗಗಳ ವಿದ್ಯುದ್ದೀಕರಣವು ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡುತ್ತದೆ. ಎಲೆಕ್ಟ್ರಿಕ್ ರೈಲು ಆರಂಭಿಕ ಶಕ್ತಿಗಾಗಿ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಡೀಸೆಲ್ ರೈಲು 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲದೇ ಎಲೆಕ್ಟ್ರಿಕ್ ರೈಲುಗಳಲ್ಲಿ ಶೀಘ್ರವಾಗಿ ವೇಗವನ್ನು ಹೆಚ್ಚಿಸಬಹುದು ಹಾಗೂ ಕಡಿಮೆ ಮಾಡಬಹುದು. ಜತೆಗೆ ಪ್ರಯಾಣದ ಸಮಯವನ್ನು ಇದು ಉಳಿಸುತ್ತದೆ,'' ಎಂದು ನೈಋುತ್ಯ ರೈಲ್ವೆಯ ಅಧಿಕಾರಿಯೊಬ್ಬರು ಹೇಳಿದರು.
2023ರ ವೇಳೆಗೆ ವಿದ್ಯುದೀಕರಣ ಪೂರ್ಣ:
''ಚಿಕ್ಕಬಾಣಾವರ-ಹಾಸನ(170 ಮಾರ್ಗ ಕಿ.ಮೀ) ವಿದ್ಯುದ್ದೀಕರಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದ್ದು, ಟೆಂಡರ್ ಹಂತದಲ್ಲಿದೆ. ಸೆಂಟ್ರಲ್ ಆರ್ಗನೈಸೇಶನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಶನ್(ಕೋರ್) ಈ ಕಾಮಗಾರಿ ಕೈಗೊಳ್ಳಲಿದ್ದು, ಇದಕ್ಕೆ 2023ರ ಡಿಸೆಂಬರ್ಗೆ ಗಡುವು ನಿಗದಿಪಡಿಸಲಾಗಿದೆ.
ಚಿಕ್ಕಬಳ್ಳಾಪುರ-ಬಂಗಾರಪೇಟೆ(102 ಮಾರ್ಗ ಕಿ.ಮೀ) ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಸಹ ನಡೆಯುತ್ತಿದ್ದು, ಇದು 2023ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ.ನೈಋುತ್ಯ ರೈಲ್ವೆ ವಲಯದ ವಿದ್ಯುದ್ದೀಕರಣ ಕಾಮಗಾರಿಯು 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ,'' ಎಂದು ಅನೀಶ್ ಹೆಗ್ಡೆ ವಿವರಿಸಿದರು.
ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣದಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ಮೆಮು ರೈಲು ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.
ಮೈಸೂರು- ಬೆಂಗಳೂರು ಮೆಮು ರೈಲು ವಿಸ್ತೃತ ಸೇವೆಗೆ ಚಾಲನೆ
ರೈಲ್ವೆ ಹಾಲ್ಟ್ ಸ್ಟೇಷನ್ ನಿರ್ಮಾಣ:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ ಬಿಐಎಲ್ ವಿಮಾನ ನಿಲ್ದಾಣ ಸಮೀಪವೇ ರೈಲ್ವೆ ಹಾಲ್ಟ್ ಸ್ಟೇಷನ್ ನಿರ್ಮಾಣ ಮಾಡಿದೆ. ಈ ಹಿಂದೆ ಬೆಂಗಳೂರು ನಗರದಿಂದ ಹಾಲ್ಟ್ ಸ್ಟೇಷನ್ಗೆ ರೈಲು ಸಂಚಾರ ಆರಂಭಿಸಲಾಗಿತ್ತು. ಆದರೆ ಪ್ರಯಾಣಿಕರ ನೀರಸ ಪ್ರತಿಕ್ರಿಯೆ ಕಾರಣ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಬಿಐಎಎಲ್ ವಿಮಾನ ನಿಲ್ದಾಣದಿಂದ 3.5 ಕಿ.ಮೀ ದೂರದ ಲ್ಲಿಏರ್ಪೋರ್ಟ್ ರೈಲ್ವೆ ಹಾಲ್ಟ್ ಸ್ಟೇಷನ್ ಅನ್ನು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಸುಮಾರು 28,000 ಉದ್ಯೋಗಿಗಳಿಗೂ ಇದು ಸಹಾಯಕವಾಗಲಿದೆ.
ಈ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಆದರೆ ಅಪಾರ ನಿರೀಕ್ಷೆಯೊಂದಿಗೆ ಆರಂಭಿಸಿದ್ದ ವಿಮಾನ ನಿಲ್ದಾಣದ ರೈಲು ಸೇವೆಗೆ ನೀರಸ ಪ್ರತಿಕ್ರಿಯೆ ದೊರೆಯಿತು. ಕೋವಿಡ್ ಲಾಕ್ಡೌನ್ ಘೋಷಣೆಯಾಗುತ್ತಲೇ ರೈಲು ಸೇವೆ ಸಹ ಸ್ಥಗಿತಗೊಳಿಸಲಾಯಿತು.
ಯಲಹಂಕ-ಪೆನುಗೊಂಡ ನಡುವೆ ಮೆಮು ರೈಲುಗಳ ಸಂಚಾರ 27 ದಿನಗಳ ಕಾಲ ಸ್ಥಗಿತ
ವಿದ್ಯುದ್ದೀಕರಣ ಬಹುತೇಕ ಪೂರ್ಣ, ವೆಚ್ಚ ಇಳಿಕೆಗೆ ಸಹಕಾರಿ, ಪ್ರಯಾಣದ ಸಮಯ ಇಳಿಕೆ ಸಾಧ್ಯ!
ಪರಿಸರ ಸ್ನೇಹಿ ಉಪಕ್ರಮದ ಭಾಗವಾಗಿ ನೈಋುತ್ಯ ರೈಲ್ವೆಯು ಬೆಂಗಳೂರು ವಿಭಾಗದ ಪ್ರಮುಖ ಮಾರ್ಗಗಳ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದೆ.
'' ಚಿಕ್ಕಬಾಣಾವರ-ಹಾಸನ ಮತ್ತು ಚಿಕ್ಕಬಳ್ಳಾಪುರ-ಬಂಗಾರಪೇಟೆ ಎರಡು ಮಾರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಮಾರ್ಗಗಳ ವಿದ್ಯುದೀಕರಣವನ್ನು ಪೂರ್ಣಗೊಳಿಸಿದ್ದೇವೆ,'' ಎಂದು ನೈಋುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಹೇಳಿದರು.
''ಡೀಸೆಲ್ ಬೆಲೆಗಳಿಗೆ ಹೋಲಿಸಿದರೆ ವಿದ್ಯುತ್ ವೆಚ್ಚವು ಕಡಿಮೆ ಇರುವುದರಿಂದ ಮಾರ್ಗಗಳ ವಿದ್ಯುದ್ದೀಕರಣವು ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡುತ್ತದೆ. ಎಲೆಕ್ಟ್ರಿಕ್ ರೈಲು ಆರಂಭಿಕ ಶಕ್ತಿಗಾಗಿ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಡೀಸೆಲ್ ರೈಲು 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲದೇ ಎಲೆಕ್ಟ್ರಿಕ್ ರೈಲುಗಳಲ್ಲಿ ಶೀಘ್ರವಾಗಿ ವೇಗವನ್ನು ಹೆಚ್ಚಿಸಬಹುದು ಹಾಗೂ ಕಡಿಮೆ ಮಾಡಬಹುದು. ಜತೆಗೆ ಪ್ರಯಾಣದ ಸಮಯವನ್ನು ಇದು ಉಳಿಸುತ್ತದೆ,'' ಎಂದು ನೈಋುತ್ಯ ರೈಲ್ವೆಯ ಅಧಿಕಾರಿಯೊಬ್ಬರು ಹೇಳಿದರು.
2023ರ ವೇಳೆಗೆ ವಿದ್ಯುದೀಕರಣ ಪೂರ್ಣ:
''ಚಿಕ್ಕಬಾಣಾವರ-ಹಾಸನ(170 ಮಾರ್ಗ ಕಿ.ಮೀ) ವಿದ್ಯುದ್ದೀಕರಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದ್ದು, ಟೆಂಡರ್ ಹಂತದಲ್ಲಿದೆ. ಸೆಂಟ್ರಲ್ ಆರ್ಗನೈಸೇಶನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಶನ್(ಕೋರ್) ಈ ಕಾಮಗಾರಿ ಕೈಗೊಳ್ಳಲಿದ್ದು, ಇದಕ್ಕೆ 2023ರ ಡಿಸೆಂಬರ್ಗೆ ಗಡುವು ನಿಗದಿಪಡಿಸಲಾಗಿದೆ.
ಚಿಕ್ಕಬಳ್ಳಾಪುರ-ಬಂಗಾರಪೇಟೆ(102 ಮಾರ್ಗ ಕಿ.ಮೀ) ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಸಹ ನಡೆಯುತ್ತಿದ್ದು, ಇದು 2023ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ.ನೈಋುತ್ಯ ರೈಲ್ವೆ ವಲಯದ ವಿದ್ಯುದ್ದೀಕರಣ ಕಾಮಗಾರಿಯು 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ,'' ಎಂದು ಅನೀಶ್ ಹೆಗ್ಡೆ ವಿವರಿಸಿದರು.