ಆ್ಯಪ್ನಗರ

ಕೋವಿಡ್‌ ಆರೈಕೆ ಕೇಂದ್ರಕ್ಕೆ ಮದ್ಯ ಕೊಂಡೊಯ್ದು ಸಿಕ್ಕಿ ಬಿದ್ದ!

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬ ಮದ್ಯದ ಪ್ಯಾಕೆಟ್‌ಗಳೊಂದಿಗೆ ಮಾರ್ಷಲ್‌ಗಳ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ತಪಾಸಣೆ ವೇಳೆ ಸೋಂಕಿತನಿಗೆ ಕೊಡಲು ಕೊಂಡೊಯ್ದಿದ್ದೆ ಎಂದು ಸಿಬ್ಬಂದಿ ಹೇಳೀದ್ದಾನೆ.

Vijaya Karnataka Web 7 Aug 2020, 7:36 am
ಪೀಣ್ಯ ದಾಸರಹಳ್ಳಿ: ನಗರದ ಹೊರವಲಯದ ಬಿಐಇಸಿ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬ ಮದ್ಯದ ಪ್ಯಾಕೆಟ್‌ಗಳೊಂದಿಗೆ ಮಾರ್ಷಲ್‌ಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸೋಂಕಿತ ವ್ಯಕ್ತಿಯೊಬ್ಬ ಬೇಡಿಕೆ ಇಟ್ಟಿದ್ದರಿಂದ ಕೊಂಡೊಯ್ಯುತ್ತಿದ್ದೆ ಎಂದು ಆತ ಹೇಳಿಕೆ ನೀಡಿದ್ದಾನೆ.
Vijaya Karnataka Web alcohol


ಲಕ್ಷಣ ರಹಿತ ಸೋಂಕಿತರನ್ನು ಈ ಆರೈಕೆ ಕೇಂದ್ರದಲ್ಲಿ ಇರಿಸಲಾಗಿದೆ. ಆರೈಕೆ ಕೇಂದ್ರದ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ಒಪ್ಪಿಸಲಾಗಿದೆ. ರೋಗಿಗಳ ಸಂಬಂಧಿಗಳಿಗೆ ಆರೈಕೆ ಕೇಂದ್ರಕ್ಕೆ ಪ್ರವೇಶವಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಅಗತ್ಯ ವಸ್ತುಗಳನ್ನು ಸಿಬ್ಬಂದಿ ಮೂಲಕ ಹೊರಗಡೆಯಿಂದ ತರಿಸಿಕೊಳ್ಳುತ್ತಿರುತ್ತಾರೆ. ಇದೇ ರೀತಿ ಸೋಂಕಿತ ಮದ್ಯವನ್ನು ತರಿಸಿಕೊಂಡಿದ್ದ ಎನ್ನಲಾಗಿದೆ.

ಸಿಬ್ಬಂದಿ ಚಲಾಯಿಸುತ್ತಿದ್ದ ಬೈಕನ್ನು ಭದ್ರತೆ ಉಸ್ತುವಾರಿ ಹೊತ್ತಿರುವ ಮಾರ್ಷಲ್‌ಗಳು ಪರಿಶೀಲಿಸಿದಾಗ ಎರಡು ವಿಸ್ಕಿ ಪ್ಯಾಕೆಟ್‌ಗಳು, ನೀರಿನ ಬಾಟಲಿ ಮತ್ತು ಚಿಫ್ಸ್‌ ಪ್ಯಾಕೆಟ್‌ ಪತ್ತೆಯಾಗಿದೆ. ಮಾರ್ಷಲ್‌ಗಳು ಯುವಕನನ್ನು ಮಾದನಾಯಕನಹಳ್ಳಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ