ಆ್ಯಪ್ನಗರ

ಸಂಡೇ ಲಾಕ್‌ಡೌನ್ ಬೇಕಾ? ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಚರ್ಚಿಸಿ ನಿರ್ಧಾರ

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರದ ಲಾಕ್‌ಡೌನ್ ಜಾರಿಗೊಳಿಸಬೇಕಾ ಅಥವಾ ಬೇಡ್ವಾ ಎಂಬುವುದರ ಕುರಿತಾಗಿ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ನಡೆಯಲಿರುವ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Vijaya Karnataka Web 21 Jul 2020, 9:22 am
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರ ಜಾರಿಯಲ್ಲಿದ್ದ ಸಂಪೂರ್ಣ ಲಾಕ್‌ಡೌನ್ ಮುಂದುವರಿಸಬೇಕಾ ಅಥವಾ ಬೇಡವೋ ಎಂಬ ಕುರಿತಾಗಿ ಮಂಗಳವಾರ ಸಿಎಂ ಬಿ.ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
Vijaya Karnataka Web lock down bengaluru


ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕು ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್‌ ಅವಧಿ ಬುಧವಾರ ಬೆಳಗ್ಗೆ 5 ಗಂಟೆಗೆ ಅಂತ್ಯಗೊಳ್ಳಲಿದೆ.

ಗರ್ಭಿಣಿಯರನ್ನು ಚಿಕಿತ್ಸೆಗೆ ಅಲೆದಾಡಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

ನಗರದಲ್ಲಿ ಮತ್ತೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಆದರೆ ಈ ಹಿಂದೆ ಜಾರಿಯಲ್ಲಿದ್ದ ಹಾಗೆ ಭಾನುವಾರದ ಸಂಪೂರ್ಣ ಲಾಕ್‌ಡೌನ್‌ ತೆರವುಗೊಳಿಸಲಾಗುತ್ತಾ ಎಂಬುವುದು ಅಧಿಕೃತವಾಗಿ ತಿಳಿದುಬಂದಿಲ್ಲ.

ಭಯಬೇಡ, ಸಕ್ಕರೆ ಕಾಯಿಲೆ ಇದ್ದರೂ ಗೆಲ್ಲಬಹುದು ಕೊರೊನಾ

ಅದರ ಜೊತೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಜಾರಿಯಲ್ಲಿತ್ತು. ಇದನ್ನು ಕೂಡಾ ಮುಂದುವರಿಸಲಾಗುತ್ತಾ ಎಂಬುವುದು ಸ್ಪಷ್ಟಗೊಂಡಿಲ್ಲ. ಈ ನಿಟ್ಟಿನಲ್ಲಿ ಮಂಗಳವಾರ ಟಾಸ್ಕ್‌ಫೋರ್ಸ್‌ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಅಂತಿಮ ರೂಪುರೇಷೆಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣ ಅಸಾಧ್ಯ ಎಂಬುವುದನ್ನು ಸರ್ಕಾರಕ್ಕೆ ಅರಿವಾಗಿದೆ. ಈ ನಿಟ್ಟಿನಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಇಲ್ಲ ಎಂದು ಸ್ವತಃ ಸಿಎಂ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ. ಆದರೆ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಆತಂಕ ಮೂಡಿಸಿದೆ. ಈ ನಿಟ್ಟಿನಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ