ಆ್ಯಪ್ನಗರ

ಕೋವಿಡ್‌ ಟೆಸ್ಟಿಂಗ್‌ ಅವ್ಯವಹಾರ ಆರೋಪ, ಪೊಬ್ಬತ್ತಿ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ವಜಾ

ಕೋವಿಡ್‌ ಟೆಸ್ಟಿಂಗ್‌ ಅವ್ಯವಹಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೊಬ್ಬತ್ತಿ ಆಸ್ಪತ್ರೆಯ ಇಬ್ಬರು ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

Vijaya Karnataka Web 28 Oct 2020, 10:22 am
ಬೆಂಗಳೂರು: ವಿವಿ ಪುರಂನ ಪೊಬ್ಬತಿ ಹೆರಿಗೆ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್‌‌ನನ್ನು ವಜಾಗೊಳಿಸಲಾಗಿದೆ. ಈ ಕುರಿತಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Vijaya Karnataka Web Dr. K. Sudhakar


ಈ ಆಸ್ಪತ್ರೆಯಲ್ಲಿ ಕೊರೊನ ನೆಗೆಟಿವ್‌ ಎಂದು ಸುಳ್ಳು ವರದಿ ನೀಡುತ್ತಿರುವುದು ಮಾಧ್ಯಮದ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳ ತಂಡ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿತ್ತು.

ಸಾರಿಗೆ ನೌಕರರ ವೇತನಕ್ಕೆ ನೆರವು ನೀಡಿ: ಸಿಎಂಗೆ ಲಕ್ಷ್ಮಣ ಸವದಿ ಮನವಿ

ಪರಿಶೀಲನೆಯ ವೇಳೆ ಕೋವಿಡ್‌ ನೆಗೆಟಿವ್‌ ಎಂದು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲ್ಯಾಬ್‌ ಟೆಕ್ನೀಷಿಯನ್‌‌ ಹಾಗೂ ಆಶಾ ಕಾರ್ಯಕರ್ತೆ ಸುಳ್ಳು ವರದಿ ನೀಡುತ್ತಿದ್ದದ್ದು ಗಮನಕ್ಕೆ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಚಿವ ಡಾ. ಕೆ ಸುಧಾಕರ್‌ ಅವರಿಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ತಿಳಿಸಿದ್ದರು.


ಅದರಂತೆ ಪೊಬ್ಬತ್ತಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ಮಹಾಲಕ್ಷ್ಮಿ ಅವರ ಕರ್ತವ್ಯ ಲೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖಾ ವರದಿ ಆಧಾರದ ಮೇಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಈ ಕುರಿತಾಗಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗುತ್ತಿಗೆ ಅಥವಾ ಖಾಯಂ ಯಾವುದೇ ನೌಕರರೇ ಆಗಿರಲಿ ಕರ್ತ್ಯವ ಲೋಪ ಎಸಗಿದರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ