ಆ್ಯಪ್ನಗರ

ಕಾಟನ್‌ಪೇಟೆ ರಸ್ತೆಯಲ್ಲಿ ವಾರದಲ್ಲಿ ಟೆಂಡರ್‌ಶ್ಯೂರ್‌ ಕಾಮಗಾರಿ

ಬಿಬಿಎಂಪಿಯು ನಗರದ ಕಾಟನ್‌ಪೇಟೆ ಮುಖ್ಯರಸ್ತೆಯನ್ನು ಟೆಂಡರ್‌ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸಲು ಮುಂದಾಗಿದೆ. ಮುಂದಿನ ಒಂದು ವಾರದಲ್ಲಿ ಕಾಮಗಾರಿ ಆರಂಭವಾಗಲಿದ್ದು, ಈ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗುತ್ತದೆ.

Vijaya Karnataka Web 29 Nov 2018, 5:00 am
ಬೆಂಗಳೂರು : ಬಿಬಿಎಂಪಿಯು ನಗರದ ಕಾಟನ್‌ಪೇಟೆ ಮುಖ್ಯರಸ್ತೆಯನ್ನು ಟೆಂಡರ್‌ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸಲು ಮುಂದಾಗಿದೆ. ಮುಂದಿನ ಒಂದು ವಾರದಲ್ಲಿ ಕಾಮಗಾರಿ ಆರಂಭವಾಗಲಿದ್ದು, ಈ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗುತ್ತದೆ.
Vijaya Karnataka Web tender sure work in cottonpete road
ಕಾಟನ್‌ಪೇಟೆ ರಸ್ತೆಯಲ್ಲಿ ವಾರದಲ್ಲಿ ಟೆಂಡರ್‌ಶ್ಯೂರ್‌ ಕಾಮಗಾರಿ


ಮೆಜೆಸ್ಟಿಕ್‌ ಸುತ್ತಮುತ್ತಲಿನ ಪ್ರದೇಶಗಳಿಂದ ಮೈಸೂರು ಮುಖ್ಯರಸ್ತೆ, ಚಾಮರಾಜಪೇಟೆಯತ್ತ ಸಂಚರಿಸುವ ವಾಹನಗಳಿಗೆ ಕಾಟನ್‌ಪೇಟೆ ಮುಖ್ಯರಸ್ತೆಯು ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಸಾಮಾನ್ಯವಾಗಿ ಈ ರಸ್ತೆಯು ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಕಿಷ್ಕಿಂಧೆಯಂತಿರುವ ಈ ರಸ್ತೆಯಲ್ಲಿ ಕಾಮಗಾರಿ ಶುರುವಾದರೆ, ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗುತ್ತದೆ.

ನಗರದ ಶಾಂತಲಾ ಸಿಲ್ಕ್‌ಹೌಸ್‌ನಿಂದ ಸಿಸಿಬಿ ಜಂಕ್ಷನ್‌ವರೆಗೆ 800 ಮೀಟರ್‌ ಉದ್ದದ ರಸ್ತೆಯಲ್ಲಿ ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಸ್ತೆಯ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಒಳಚರಂಡಿ ಕೊಳವೆಗಳನ್ನು ಸ್ಥಳಾಂತರಿಸಲು ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಒಳಚರಂಡಿ ಕೊಳವೆಗಳನ್ನು ಅಳವಡಿಸುವ ಕುರಿತು ಜಲಮಂಡಳಿಯೊಂದಿಗೆ ಚರ್ಚಿಸಲಾಗುತ್ತಿದೆ.

ಮೆಜೆಸ್ಟಿಕ್‌ ಸುತ್ತಮುತ್ತಲಿನ 6 ಪ್ರಮುಖ ರಸ್ತೆಗಳು, 11 ಅಡ್ಡ ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ 129 ಕೋಟಿ ರೂ. ವ್ಯಯಿಸಲಾಗುತ್ತಿದ್ದು, ಇದರಲ್ಲಿ ಕಾಟನ್‌ಪೇಟೆ ಮುಖ್ಯರಸ್ತೆಯೂ ಸೇರಿದೆ. ಒಳಚರಂಡಿ ಕೊಳವೆಗಳ ಸೋರಿಕೆ ಮತ್ತು ಮ್ಯಾನ್‌ಹೋಲ್‌ಗಳು ಪದೇ ಪದೇ ಉಕ್ಕಿ ಹರಿಯುವುದರಿಂದ ಕಾಟನ್‌ಪೇಟೆ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಹಾಳಾಗುತ್ತಿದೆ. ಹೀಗಾಗಿ, ಈ ರಸ್ತೆಯನ್ನು ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ,'' ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್‌ (ಯೋಜನೆ) ಕೆ.ಟಿ.ನಾಗರಾಜ್‌ ತಿಳಿಸಿದರು.

''ಒಂದು ವಾರದಲ್ಲಿ ಕಾಮಗಾರಿ ಶುರು ಮಾಡಲಾಗುವುದು. ಇದಕ್ಕೆ ಸಂಚಾರ ಪೊಲೀಸರು ಅನುಮತಿ ನೀಡಿದ್ದು, ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆಯತ್ತ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಿದ್ದಾರೆ. ಶೀಘ್ರದಲ್ಲೇ ಮೂಲಸೌಕರ್ಯಗಳನ್ನು ಸ್ಥಳಾಂತರಿಸಲು ಕೆಲಸ ಶುರು ಮಾಡಲಾಗುವುದು,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ