ಆ್ಯಪ್ನಗರ

ಪುತ್ರಿಯೂ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಅರ್ಹಳು; ಹೈಕೋರ್ಟ್‌ ಮಹತ್ವದ ಆದೇಶ

ಈವರೆಗೂ ಪತ್ನಿ, ಪುತ್ರ ಅಥವಾ ಅವಿವಾಹಿತ ಪುತ್ರಿ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ಪಡೆಯಬಹುದಾಗಿತ್ತು. ವಿವಾಹಿತ ಪುತ್ರಿ ಅನುಕಂಪದ ನೌಕರಿಗೆ ಅವಕಾಶವಿರಲಿಲ್ಲ. ಹೈಕೋರ್ಟ್‌ ಈ ತೀರ್ಪಿನಿಂದಾಗಿ ವಿವಾಹಿತ ಪುತ್ರಿಯೂ ಉದ್ಯೋಗಕ್ಕೆ ಅರ್ಹರಾಗುತ್ತಾರೆ.

Vijaya Karnataka Web 17 Dec 2020, 6:25 am
ಬೆಂಗಳೂರು: ಮೃತ ಸರಕಾರಿ ನೌಕರನ ವಿವಾಹಿತ ಪುತ್ರಿಯೂ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಅರ್ಹ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.
Vijaya Karnataka Web karnataka high court


ವಿವಾಹಿತರಾಗಿದ್ದಾರೆಂಬ ಕಾರಣಕ್ಕೆ ಅನುಕಂಪದ ಉದ್ಯೋಗ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಬೆಂಗಳೂರಿನ ವಾಸಿ ಭುವನೇಶ್ವರಿ ವಿ.ಪುರಾಣಿಕ್‌ ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ-ಪೀಠ ಈ ಆದೇಶ ಮಾಡಿದೆ. ಈವರೆಗೂ ಪತ್ನಿ, ಪುತ್ರ ಅಥವಾ ಅವಿವಾಹಿತ ಪುತ್ರಿ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ಪಡೆಯಬಹುದಾಗಿತ್ತು. ವಿವಾಹಿತ ಪುತ್ರಿ ಅನುಕಂಪದ ನೌಕರಿಗೆ ಅವಕಾಶವಿರಲಿಲ್ಲ. ಹೈಕೋರ್ಟ್‌ ಈ ತೀರ್ಪಿನಿಂದಾಗಿ ವಿವಾಹಿತ ಪುತ್ರಿಯೂ ಉದ್ಯೋಗಕ್ಕೆ ಅರ್ಹರಾಗುತ್ತಾರೆ.

ನ್ಯೂ ಇಯರ್‌ ಸೆಲೆಬ್ರೇಷನ್‌ ಮಾಡ್ಬೇಕು ಅಂದ್ಕೊಂಡಿದ್ದೀರಾ?; ಹಾಗಿದ್ರೆ ಇಲ್ಲಿ ಗಮನಿಸಿ,

ಪುತ್ರನಂತೆಯೇ ಪುತ್ರಿಯೂ ವಿವಾಹವಾದರೂ ಪುತ್ರಿಯೇ ಆಗಿರುತ್ತಾಳೆ. ವಿವಾಹಿತ ಪುತ್ರಿಯ ಅನುಕಂಪದ ಉದ್ಯೋಗ ಕೋರಲು ಅರ್ಹಳಲ್ಲವೆಂಬ ನಿಯಮ ಲಿಂಗ ತಾರತಮ್ಯದಿಂದ ಕೂಡಿದೆ. ಲಿಂಗ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ. ಪುತ್ರನ ವೈವಾಹಿಕ ಸ್ಥಾನಮಾನವು ಅನುಕಂಪದ ಉದ್ಯೋಗಕ್ಕೆ ಅರ್ಹರಾಗಿರುವಾಗ, ವಿವಾಹಿತ ಮಗಳು ಸಹ ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ರಾಚೇನಹಳ್ಳಿ ಕೆರೆಯ ₹80 ಕೋಟಿ ಮೌಲ್ಯದ 2.38 ಎಕರೆ ಅತಿಕ್ರಮಣ ತೆರವು..!

ಪುತ್ರ ಮತ್ತು ಪುತ್ರಿಯ ವೈವಾಹಿಕ ಸ್ಥಾನಮಾನವು ಅನುಕುಂಪದ ಉದ್ಯೋಗ ಪಡೆಯುವಲ್ಲಿ ಯಾವುದೇ ವ್ಯತ್ಯಾಸ ಉಂಟು ಮಾಡುವುದಿಲ್ಲ. ಪ್ರಕೃತಿಯು ಮಹಿಳೆಗೆ ಸಾಕಷ್ಟು ನೀಡುವಾಗ ಕಾನೂನು ಕಡಿಮೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ವಿವಾಹಿತ ಪುತ್ರಿಯನ್ನು ಹೊರಗಿಟ್ಟು 'ಕುಟುಂಬ'ವನ್ನು ಅರ್ಥೈಸುವ ಮತ್ತು ವಿವಾಹಿತ ಪುತ್ರಿ ಅನುಕಂಪದ ಉದ್ಯೋಗ ಕೋರಲು ಅನರ್ಹಳು ಎಂದು ಪ್ರತಿಪಾದಿಸುವ ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ಅಧಿನಿಯಮದ 1996ರ ನಿಯಮ 2(1)(ಎ)(ಐ), ನಿಯಮ 2(1)(ಬಿ) ಮತ್ತು 3 (2)(ಐ)(ಸಿ) ತಾರತಮ್ಯದಿಂದ ಕೂಡಿದ್ದು, ಸಂವಿಧಾನದ ಪರಿಚ್ಛೇದ 14 ಮತ್ತು 15 ಅನ್ನು ಉಲ್ಲಂಸುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.

ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಬಿಗ್‌ ರಿಲೀಫ್; ಬೈಲಾಗೆ ತಿದ್ದುಪಡಿ ತಂದು ಆದಾಯ ಹೆಚ್ಚಿಸಲು ಬಿಬಿಎಂಪಿ

ನಿಯಮಗಳಲ್ಲಿ ಅವಿವಾಹಿತ ಎಂಬ ಪದವನ್ನು ರದ್ದುಪಡಿಸುವುದರ ಜತೆಗೆ ಅನುಕಂಪದ ಉದ್ಯೋಗಕ್ಕಾಗಿ ಅರ್ಜಿದಾರರ ಕ್ಲೇಮನ್ನು ಮತ್ತೆ ಪರಿಗಣಿಸಬೇಕು. ಮರು ಪರಿಗಣಿಸಿದ ನಂತರ ಈ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ತಿಂಗಳಲ್ಲಿ ಆದೇಶ ಹೊರಡಿಸಬೇಕು ಎಂದು ಸರಕಾರಕ್ಕೆ ಆದೇಶಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ