ಆ್ಯಪ್ನಗರ

ಎನ್‌ಜಿಟಿ ಆದೇಶ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಳ್ಳಂದೂರು ಕೆರೆಯನ್ನು 1 ತಿಂಗಳಲ್ಲಿ ಸ್ವಚ್ಛಗೊಳಿಸಬೇಕು ಮತ್ತು ತ್ಯಾಜ್ಯವನ್ನು ಕೆರೆಗೆ ಹರಿಸುವ ಕೈಗಾರಿಕೆಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೆಹಲಿಯ ಎನ್‌ಜಿಟಿ ಹೊರಡಿಸಿದ್ದ ಆದೇಶ ರದ್ದು ಕೋರಿ ನಗರದ ಹುಳಿಮಾವಿನ ಶಶಿ ಡಿಸ್ಟಿಲರೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿತು.

Vijaya Karnataka 11 Apr 2018, 5:00 am
ಬೆಂಗಳೂರು: ಬೆಳ್ಳಂದೂರು ಕೆರೆಯನ್ನು 1 ತಿಂಗಳಲ್ಲಿ ಸ್ವಚ್ಛಗೊಳಿಸಬೇಕು ಮತ್ತು ತ್ಯಾಜ್ಯವನ್ನು ಕೆರೆಗೆ ಹರಿಸುವ ಕೈಗಾರಿಕೆಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೆಹಲಿಯ ಎನ್‌ಜಿಟಿ ಹೊರಡಿಸಿದ್ದ ಆದೇಶ ರದ್ದು ಕೋರಿ ನಗರದ ಹುಳಿಮಾವಿನ ಶಶಿ ಡಿಸ್ಟಿಲರೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿತು.
Vijaya Karnataka Web the high court dismissed the petition seeking an ngt order
ಎನ್‌ಜಿಟಿ ಆದೇಶ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌


ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಶ್ಯಾಮ್‌ ಸುಂದರ್‌ ಅವರಿದ್ದ ವಿಭಾಗೀಯ ಪೀಠ, ಶಶಿ ಡಿಸ್ಟಲಿರೀಸ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಅರ್ಹವಾಗಿಲ್ಲ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸಬೇಕಾಗುತ್ತದೆ, ಇಲ್ಲವೇ ಅರ್ಜಿದಾರರ ವಕೀಲರೇ ಬೇಕಿದ್ದರೆ ಅರ್ಜಿ ಹಿಂಪಡೆಯಬಹುದು ಎಂಬುದು ಹೇಳಿತು.

ನಂತರ ಅರ್ಜಿದಾರರ ಪರ ವಕೀಲರು ಮೆಮೋ ಸಲ್ಲಿಸಿ, ಅರ್ಜಿಯನ್ನು ಹಿಂಪಡೆದರು. ಅಷ್ಟರಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನದ ಪರ ವಕೀಲರು, ಜೂನ್‌ 15ರಂದು ಹೈಕೋರ್ಟ್‌ ಹೊರಡಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ 2017ರ ಆ.8ರಂದು ಸುಪ್ರೀಂ ಕೋರ್ಟ್‌ ಹೊರಡಿಸಿದ್ದ ಆದೇಶದ ಪ್ರತಿಯನ್ನು ವಿಭಾಗೀಯ ಪೀಠಕ್ಕೆ ಸಲ್ಲಿಸಿದರು. ಈ ಆದೇಶ ಪ್ರತಿಯಲ್ಲಿ ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಪರಿಶೀಲಿಸಿದ ವಿಭಾಗೀಯ ಪೀಠವು, ಅರ್ಜಿ ವಜಾ ಮಾಡಲಾಗುವುದು ಎಂದು ಹೇಳಿತು. ಬೆಳ್ಳಂದೂರು ಕೆರೆಯನ್ನು ಒಂದು ತಿಂಗಳಲ್ಲಿ ಸ್ವಚ್ಛಗೊಳಿಸಬೇಕು ಮತ್ತು ಸಂಸ್ಕರಿಸದ ನೀರು ಹಾಗೂ ತ್ಯಾಜ್ಯ ಕೆರೆಗೆ ಹರಿಬಿಡುವ ಕೈಗಾರಿಕೆಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಹಾಗೂ ಕೆಎಸ್‌ಪಿಸಿಬಿಗೆ ನಿರ್ದೇಶಿಸಿ ದೆಹಲಿ ಹಸಿರು ನ್ಯಾಯಾಧಿಕರಣ ಪೀಠ 2017ರ ಏ.19ರಂದು ಆದೇಶಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ