ಬಾರ್ಗೆ ತುರ್ತು ನಿರ್ಗಮನ ದ್ವಾರ ಇರಲಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
ನಗರದ ಕೆ.ಆರ್ ಮಾರುಕಟ್ಟೆ ಪ್ರದೇಶದ ಕೈಲಾಶ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಇನ್ನೊಂದು ನಿರ್ಗಮನ ಬಾಗಿಲು ಇದ್ದಿದ್ದರೆ ಅಗ್ನಿ ದುರಂತದಲ್ಲಿ ಪ್ರಾಣಹಾನಿಯಾಗುವುದನ್ನು ತಪ್ಪಿಸಬಹುದಿತ್ತು ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
TNN 8 Jan 2018, 1:26 pm
ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆ ಪ್ರದೇಶದ ಕೈಲಾಶ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಇನ್ನೊಂದು ನಿರ್ಗಮನ ಬಾಗಿಲು ಇದ್ದಿದ್ದರೆ ಅಗ್ನಿ ದುರಂತದಲ್ಲಿ ಪ್ರಾಣಹಾನಿಯಾಗುವುದನ್ನು ತಪ್ಪಿಸಬಹುದಿತ್ತು ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಲಾಸಿಪಾಳ್ಯದಲ್ಲಿರುವ ದುರಂತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, 'ಬಾರ್ನಲ್ಲಿ ಒಂದೇ ಬಾಗಿಲು ಇತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮೃತಪಟ್ಟವರೆಲ್ಲರೂ ಬಾರ್ ಉದ್ಯೋಗಿಗಳಾಗಿದ್ದು, ಅಗ್ನಿ ದುರಂತ ಸಂಭವಿಸಿದಾಗ ಹೊರಬರಲಾಗದೆ ಮೃತಪಟ್ಟಿದ್ದಾರೆ' ಎಂದು ತಿಳಿಸಿದರು.
'ಇಬ್ಬರು ಬೆಂಕಿಯಲ್ಲಿ ಸುಟ್ಟು ಮೃತಪಟ್ಟರೆ, ಉಳಿದ ಮೂವರು ಹೊರಬರಲು ಬೇರೆ ದಾರಿಯಿಲ್ಲದೆ ಒಳಗಡೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ದುರಂತಕ್ಕೆ ಶಾರ್ಟ್ ಸರ್ಕಿಟ್ ಕಾರಣವೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ' ಎಂದು ರೆಡ್ಡಿ ವಿವರಿಸಿದರು.
ಬೆಂಗಳೂರು: ಬಾರ್ನಲ್ಲಿ ಬೆಂಕಿ, ಐವರ ಮೃತ್ಯು
ನಗರದ ಎಲ್ಲ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆಯೇ ಎಂಬ ಬಗ್ಗೆ ಸಮಗ್ರ ಪರಾಮರ್ಶೆ ನಡೆಸುವಂತೆ ಅಗ್ನಿಶಾಮಕ ಇಲಾಖೆಗೆ ಸೂಚಿಸಲಾಗಿದೆ. ಈ ಬಾರ್ನಲ್ಲಿ ಬೆಂಕಿ ನಂದಿಸುವ ಉಪಕರಣಗಳಿದ್ದವೆ ಎಂಬುದನ್ನೂ ಪತ್ತೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ಗಳ ಪರವಾನಗಿ ನವೀಕರಣದ ಮೊದಲು ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗುತ್ತಿದೆಯೆ ಎಂದು ಖಾತ್ರಿಪಡಿಸುವಂತೆ ಅಬಕಾರಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ನಿರ್ದೇಶನ ನೀಡಲಾಗಿದೆ.
ಕಲಾಸಿಪಾಳ್ಯದಲ್ಲಿರುವ ದುರಂತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, 'ಬಾರ್ನಲ್ಲಿ ಒಂದೇ ಬಾಗಿಲು ಇತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮೃತಪಟ್ಟವರೆಲ್ಲರೂ ಬಾರ್ ಉದ್ಯೋಗಿಗಳಾಗಿದ್ದು, ಅಗ್ನಿ ದುರಂತ ಸಂಭವಿಸಿದಾಗ ಹೊರಬರಲಾಗದೆ ಮೃತಪಟ್ಟಿದ್ದಾರೆ' ಎಂದು ತಿಳಿಸಿದರು.
'ಇಬ್ಬರು ಬೆಂಕಿಯಲ್ಲಿ ಸುಟ್ಟು ಮೃತಪಟ್ಟರೆ, ಉಳಿದ ಮೂವರು ಹೊರಬರಲು ಬೇರೆ ದಾರಿಯಿಲ್ಲದೆ ಒಳಗಡೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ದುರಂತಕ್ಕೆ ಶಾರ್ಟ್ ಸರ್ಕಿಟ್ ಕಾರಣವೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ' ಎಂದು ರೆಡ್ಡಿ ವಿವರಿಸಿದರು.
ಬೆಂಗಳೂರು: ಬಾರ್ನಲ್ಲಿ ಬೆಂಕಿ, ಐವರ ಮೃತ್ಯು
ನಗರದ ಎಲ್ಲ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆಯೇ ಎಂಬ ಬಗ್ಗೆ ಸಮಗ್ರ ಪರಾಮರ್ಶೆ ನಡೆಸುವಂತೆ ಅಗ್ನಿಶಾಮಕ ಇಲಾಖೆಗೆ ಸೂಚಿಸಲಾಗಿದೆ. ಈ ಬಾರ್ನಲ್ಲಿ ಬೆಂಕಿ ನಂದಿಸುವ ಉಪಕರಣಗಳಿದ್ದವೆ ಎಂಬುದನ್ನೂ ಪತ್ತೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ಗಳ ಪರವಾನಗಿ ನವೀಕರಣದ ಮೊದಲು ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗುತ್ತಿದೆಯೆ ಎಂದು ಖಾತ್ರಿಪಡಿಸುವಂತೆ ಅಬಕಾರಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ನಿರ್ದೇಶನ ನೀಡಲಾಗಿದೆ.