ಆ್ಯಪ್ನಗರ

ಬೆಂಗಳೂರಿನಲ್ಲಿ ಇನ್ನೆರಡು ದಿನಗಳಲ್ಲಿ ದಿನಸಿ ವಸ್ತುಗಳ ಅಭಾವ! ಆಮ್ ಆದ್ಮಿ ಪಕ್ಷ ಎಚ್ಚರಿಕೆ

ಇನ್ನೆರಡು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ದಿನಸಿ ಅಭಾವ ತಲೆಧೋರುವ ಸಾಧ್ಯತೆ ಇದೆ ಎಂದು ಆಮ್‌ ಆದ್ಮಿ ಪಕ್ಷ ಎಚ್ಚರಿಸಿದೆ. ಭಾನುವಾರ ಪಕ್ಷದ ಕಾರ್ಯಕರ್ತರು ವಿವಿಧ ಕಡೆಗಳಲ್ಲಿ ರಿಯಾಲಿಟಿ ಚೆಕ್‌ ನಡೆಸಿದಾಗ ಈ ಸಮಸ್ಯೆ ಬೆಳಕಿಗೆ ಬಂದಿದೆ ಎಂದು ಹೇಳಿಕೊಂಡಿದೆ.

Vijaya Karnataka Web 5 Apr 2020, 4:10 pm
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಬೆಂಗಳೂರಿನಲ್ಲಿ ದಿನಸಿ ವಸ್ತುಗಳ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಆಮ್‌ಆದ್ಮಿ ಪಕ್ಷ ಸರ್ಕಾರವನ್ನು ಎಚ್ಚರಿಸಿದೆ. ಬೆಂಗಳೂರಿನಲ್ಲಿರುವ ಸ್ಥಳೀಯ ದಿನಸಿ ಅಂಗಡಿಗಳಲ್ಲಿ ಇದುವರೆವಿಗೂ ದೊರಕುತ್ತಿರುವ ದಿನಸಿ ವಸ್ತುಗಳು ಮುಗಿಯುತ್ತಾ ಬಂದಿದ್ದು , ಇನ್ನೆರಡು ದಿವಸಗಳಲ್ಲಿ ಈ ಎಲ್ಲ ವಸ್ತುಗಳಿಗೆ ಅಭಾವ ತರುವ ಸಂಭವವಿದೆ ಎಂದು ಆಮ್ ಆದ್ಮಿ ಪಾರ್ಟಿಯ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದ್ದಾರೆ.
Vijaya Karnataka Web grosary


ಭಾನುವಾರ ಬೆಳಗ್ಗಿನಿಂದ ಆಮ್ ಆದ್ಮಿ ಪಕ್ಷದ ಎಲ್ಲ ವಿಧಾನಸಭಾ ಕಾರ್ಯಕರ್ತರುಗಳು ತಮ್ಮತಮ್ಮ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿನ ವ್ಯಾಪಾರಸ್ಥರ ಬಳಿ ಮಾತನಾಡಿಸಿದಾಗ ಈ ಅಂಶವು ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎರಡು ದಿನಗಳಿಗಾಗುವಷ್ಟು ದಿನಸಿಗಳು ಮಾತ್ರ ನಮ್ಮಲ್ಲಿ ಲಭ್ಯವಿದ್ದು ಮುಂದಿನ ದಿನಗಳಲ್ಲಿ ದಿನಸಿ ವಸ್ತುಗಳ ಅಭಾವವಾಗುವ ಸಂಭವವಿದೆ ಎಂದು ತಮ್ಮ ಆತಂಕವನ್ನು ವ್ಯಾಪಾರಸ್ಥರು ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಕಷ್ಟು ದಿವಸಗಾಗುವಷ್ಟು ದಿನಸಿಗಳು ಲಭ್ಯವಿದ್ದರೂ ಸಹ ಅಲ್ಲಿಂದ ನಗರದ ಸ್ಥಳೀಯ ಪ್ರದೇಶದ ಅಂಗಡಿಗಳಿಗೆ ತಲುಪಿಸುವ ವ್ಯವಸ್ಥೆಯು ತುಂಡಾಗಿರುವುದು ಇದಕ್ಕೆಲ್ಲಾ ಕಾರಣವೆಂದು ಹೇಳುತ್ತಾರೆ. ಇದಕ್ಕೆ ಮೂಲ ಕಾರಣ ಕೂಲಿ ಕಾರ್ಮಿಕರ ಅಭಾವವಾಗಿದೆ.

ಬೆಳಗಾವಿಯಲ್ಲಿ ಲಾಕ್‌ಡೌನ್‌ ಇನ್ನು ಕಟ್ಟುನಿಟ್ಟು, ಬಿಗಿ ಕ್ರಮಕ್ಕೆ ರಮೇಶ್ ಜಾರಕಿಹೊಳಿ ಸೂಚನೆ

ಪ್ರತಿ ದಿವಸವೂ ಸ್ಥಳೀಯ ಅಂಗಡಿಗಳಿಗೆ ಹಾಗೂ ಎಪಿಎಂಸಿ ಮಾರುಕಟ್ಟೆಗಳಿಗೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರುಗಳು ಏಕಾಏಕಿ ಲಾಕ್ ಡೌನ್ ನಿಂದಾಗಿ ಕೆಲಸಕ್ಕೆ ಹಾಜರಾಗುತ್ತಿಲ್ಲ.
ಈ ಕೂಲಿ ಕಾರ್ಮಿಕರು ಗಳ ದಿನನಿತ್ಯದ ಕಷ್ಟ ಸುಖಗಳನ್ನು ಸರ್ಕಾರ ಇದುವರೆಗೂ ಕೇಳಿಲ್ಲ. ದೈನಂದಿನ ಕೂಲಿ ಮಾಡಿಕೊಂಡು ತಮ್ಮ ಹೊಟ್ಟೆಯನ್ನು ಹೊರೆದುಕೊಳ್ಳುತ್ತಿದ್ದ ಈ ಅಸಂಘಟಿತ ಕೂಲಿ ಕಾರ್ಮಿಕರುಗಳು ಇಂದು ತಮ್ಮ ದೈನಂದಿನ ಕಾರ್ಯ ನಿರ್ವಹಣೆಯನ್ನು ಮಾಡಲು ಮನಸ್ಸನ್ನು ತೋರುತ್ತಿಲ್ಲ ಎಂದು ಆರೋಪಿಸಿದೆ.

ಸಿಆರ್‌ಪಿಎಫ್ ಮುಖ್ಯಸ್ಥರಿಗೆ ಕೊರೊನಾ ವೈರಸ್: ಸ್ವಯಂ ದಿಗ್ಬಂಧನದಲ್ಲಿ ಎಪಿ ಮಹೇಶ್ವರಿ!

ಆದುದರಿಂದ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಹಾಗೂ ಕಾರ್ಮಿಕ ಮಂತ್ರಿಗಳು, ಅಧಿಕಾರಿಗಳು ಈ ಕೂಡಲೇ ಈ ಕೂಲಿ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚಿಸಿ ಅವರುಗಳ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಮೂಲಕ ಬೆಂಗಳೂರಿನ ಪ್ರತಿಯೊಂದು ಪ್ರದೇಶಗಳಲ್ಲಿಯೂ ದಿನಸಿ ವಸ್ತುಗಳು ಸುಲಲಿತವಾಗಿ ದೊರಕುವಂತೆ ಮಾಡಬೇಕೆಂಬುದು ಆಮ್ ಆದ್ಮಿ ಪಕ್ಷದ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ