ಆ್ಯಪ್ನಗರ

ಶಾಸಕರ ಪತ್ನಿಯ ಗಮನ ಬೇರೆಡೆ ಸೆಳೆದು ಕಳ್ಳತನ

ಶಾಸಕರೊಬ್ಬರ ಪತ್ನಿಯ ಗಮನ ಬೇರೆಡೆ ಸೆಳೆದ ದುಷ್ಕರ್ಮಿಗಳು ಒಂದೂವರೆ ಲಕ್ಷ ರೂಪಾಯಿ ಹಾಗೂ ಕಾರಿನ ದಾಖಲೆಗಳು ಇದ್ದ ಬ್ಯಾಗನ್ನು ಎಗರಿಸಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 30 Jan 2019, 5:00 am
ಬೆಂಗಳೂರು : ಶಾಸಕರೊಬ್ಬರ ಪತ್ನಿಯ ಗಮನ ಬೇರೆಡೆ ಸೆಳೆದ ದುಷ್ಕರ್ಮಿಗಳು ಒಂದೂವರೆ ಲಕ್ಷ ರೂಪಾಯಿ ಹಾಗೂ ಕಾರಿನ ದಾಖಲೆಗಳು ಇದ್ದ ಬ್ಯಾಗನ್ನು ಎಗರಿಸಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web thiefs snatched mlas wifes bag
ಶಾಸಕರ ಪತ್ನಿಯ ಗಮನ ಬೇರೆಡೆ ಸೆಳೆದು ಕಳ್ಳತನ


ಕುಣಿಗಲ್‌ ಶಾಸಕ ಎಚ್‌.ಡಿ.ರಂಗನಾಥ್‌ ಅವರ ಪತ್ನಿ ಸುಮಾ ಅವರಿಗೆ ಸೇರಿದ ಬ್ಯಾಗನ್ನು ಕದಿಯಲಾಗಿದೆ.

ಸುಮಾ ಅವರು ಖಾಸಗಿ ಬ್ಯಾಂಕ್‌ವೊಂದರಲ್ಲಿ ಆರ್‌ಟಿಜಿಎಸ್‌ ಮೂಲಕ ಹಣ ಕಳುಹಿಸಿ, ಉಳಿದ ಹಣವನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಂಡು ಕಾರಿನಲ್ಲಿ ಕುಳಿತಿದ್ದರು. ಕಾರಿನ ಚಾಲಕನಿಗಾಗಿ ಕಾಯುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಬಂದು ವಿಳಾಸ ಕೇಳುವವನಂತೆ ಮಾತಿಗೆ ಎಳೆದಿದ್ದ, ಅವರು ಮಾತನಾಡುತ್ತಿದ್ದಾಗಲೇ ಮತ್ತೊಬ್ಬ ಹಿಂಬದಿ ಕಿಟಕಿ ಮೂಲಕ ಕೈ ಹಾಕಿ ಬ್ಯಾಗ್‌ ಎತ್ತಿಕೊಂಡು ಪರಾರಿ ಆಗಿದ್ದಾನೆ.

ವಿಜಯನಗರ ಠಾಣೆಗೆ ದೂರು ನೀಡಲಾಗಿದ್ದು ತನಿಖೆ ಮುಂದುವರಿದಿದೆ. ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್‌, 'ಘಟನಾ ಸ್ಥಳದ ಸುತ್ತ ಮುತ್ತ ಇರುವ ಸಿಸಿಟಿವಿ ದೃಶ್ಯಗಳ ನೆರವು ಪಡೆದು ತನಿಖೆ ನಡೆಸಲಾಗುತ್ತಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು,'' ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ