ಆ್ಯಪ್ನಗರ

ಬೆಂಗಳೂರು: ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿದರು, 27 ಲಕ್ಷ ರೂ. ಲೂಟಿ ಮಾಡಿ ಪರಾರಿಯಾದರು

ಕೃತ್ಯ ಎಸಗಿದವರು ಮುಖಕ್ಕೆ ಮುಸುಕು ಧರಿಸಿದ್ದರೂ ಮಹತ್ವದ ಸುಳಿವನ್ನು ಬಿಟ್ಟು ಹೋಗಿದ್ದಾರೆ. ಕೃತ್ಯ ನಡೆಸುವ ಕೆಲ ದಿನಗಳ ಹಿಂದೆ ಈ ಕೇಂದ್ರದ ಎದುರಿಗೆ ಅನುಮಾನಾಸ್ಪದವಾಗಿ ಓಡಾಡಿರುವುದೂ ಗೊತ್ತಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka Web 10 Aug 2020, 11:26 pm
ಬೆಂಗಳೂರು: ಸೆಕ್ಯುರಿಟಿ ಗಾರ್ಡ್‌ ಇಲ್ಲದ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು ಗ್ಯಾಸ್‌ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ ಅದರಲ್ಲಿದ್ದ 27 ಲಕ್ಷ ರೂಪಾಯಿಯನ್ನು ಕದ್ದು ಪರಾರಿಯಾಗಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಜಾಲಹಳ್ಳಿಯ ಎಂಇಎಸ್‌ ಬಳಿ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ರಾತ್ರಿ 2 ಗಂಟೆ ಸುಮಾರಿಗೆ ಮುಸುಕುಧರಿಸಿ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಮೊದಲಿಗೆ ಎಟಿಎಂ ಕೇಂದ್ರದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಬಳಿದಿದ್ದಾರೆ. ಬಳಿಕ ಕೇಬಲ್‌ಗಳನ್ನು ಕತ್ತರಿಸಿ ತಮ್ಮ ಕೃತ್ಯ ಮತ್ತು ಚಹರೆ ದಾಖಲಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ನಂತರ ಗ್ಯಾಸ್‌ ಕಟರ್‌ನಿಂದ ಯಂತ್ರವನ್ನು ಸಂಪೂರ್ಣವಾಗಿ ಕತ್ತರಿಸಿ 27 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ಎಟಿಎಂ ಬಳಿ ಸಾರ್ವಜನಿಕರು ಬಂದಾಗ ವಿಚಾರ ಗೊತ್ತಾಗಿದ್ದು, ಹಿರಿಯ ಅಧಿಕಾರಿಗಳು ಮತ್ತು ಎಫ್‌ಎಸ್‌ಎಲ್‌ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂ ಕೇಂದ್ರಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಹಾಗೂ ಭದ್ರತಾ ಸಿಬ್ಬಂದಿ ನಿಯೋಜಿಸುವುದು ಬ್ಯಾಂಕ್‌ಗಳ ಹೊಣೆಗಾರಿಕೆ. ಒಂದು ವೇಳೆ ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದ ಬಳಿಕವೂ ಭದ್ರತಾ ಸಿಬ್ಬಂದಿ ನಿಯೋಜನೆ ಆಗಿರಲಿಲ್ಲ. ಈ ನಿರ್ಲಕ್ಷ್ಯಕ್ಕಾಗಿ ಬ್ಯಾಂಕ್‌ ಅಧಿಕಾರಿಗಳಿಂದ ಪೊಲೀಸರು ವಿವರಣೆ ಕೇಳಿದ್ದು ಬಳಿಕ ಅವರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಸುಳಿವು ಪತ್ತೆ

ಕೃತ್ಯ ಎಸಗಿದವರು ಮುಖಕ್ಕೆ ಮುಸುಕು ಧರಿಸಿದ್ದರೂ ಮಹತ್ವದ ಸುಳಿವನ್ನು ಬಿಟ್ಟು ಹೋಗಿದ್ದಾರೆ. ಕೃತ್ಯ ನಡೆಸುವ ಕೆಲ ದಿನಗಳ ಹಿಂದೆ ಈ ಕೇಂದ್ರದ ಎದುರಿಗೆ ಅನುಮಾನಾಸ್ಪದವಾಗಿ ಓಡಾಡಿರುವುದೂ ಗೊತ್ತಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ