ಆ್ಯಪ್ನಗರ

ಐಎಂಎ ಸಾವಿರಾರು ಕೋಟಿ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಅಮಾನತು..!

ಅಕ್ರಮದ ಕುರಿತು ರಾಜ್ಯ ಸರಕಾರ ಸಿಐಡಿ ವಿಚಾರಣೆಗೆ ಕಳುಹಿಸಿದ್ದ ವೇಳೆ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ ಅವರು ಸೂಕ್ತ ತನಿಖೆ ನಡೆಸಿಲ್ಲ. ಐಎಂಎ ಕಂಪನಿ ವ್ಯವಹಾರಗಳು ಕೆಪಿಐಡಿ ಕಾಯಿದೆಯ ಉಲ್ಲಂಘನೆಯಾಗುವುದಿಲ್ಲ ಎಂದು ವರದಿ ನೀಡಿದ್ದರು. ಲಂಚ ಪಡೆದು ಐಎಂಎ ಕಂಪನಿಗಳ ಅವ್ಯವಹಾರಗಳು ಮುಂದುವರಿಯಲು ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.

Vijaya Karnataka Web 20 Oct 2020, 7:59 am
ಬೆಂಗಳೂರು: ನಾಲ್ಕು ಸಾವಿರ ಕೋಟಿ ರೂ.ಗಳ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಯಲ್ಲಿ ಆರೋಪಿಗಳೆಂದು ಉಲ್ಲೇಖಿಸಲಾಗಿರುವ ಮೂವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web ima fraud case


ಭಕ್ತರಿಗೆ ಸಿಹಿಸುದ್ದಿ; ಬನಶಂಕರಿ ದೇವಿಯ ದರ್ಶನಕ್ಕೆ ಮತ್ತೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ

ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ, ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಆಗಿದ್ದ ಎಂ. ರಮೇಶ್‌ ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಪಿ. ಗೌರಿಶಂಕರ್‌ ಅಮಾನತುಗೊಂಡ ಅಧಿಕಾರಿಗಳು. ಐಎಂಎ ಕುರಿತು ದೂರುಗಳು ಬಂದಾಗ ಸರಿಯಾದ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಿ ಅಕ್ರಮ ನಿಲ್ಲಿಸುವ ಬದಲು ಆರೋಪಿತ ಕಂಪನಿಯ ಎಂ.ಡಿ. ಮನ್ಸೂರ್‌ ಖಾನ್‌ನಿಂದ ಲಂಚ ಪಡೆದ ಆರೋಪವನ್ನು ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ಇನ್ಸ್‌ಪೆಕ್ಟರ್‌ ಮತ್ತು ಎಸ್‌ಐ ಎದುರಿಸುತ್ತಿದ್ದಾರೆ.

ಆರ್‌ಆರ್‌ನಗರ ಬೈಎಲೆಕ್ಷನ್: ‘ಜನರ ಕೈಯಿಂದ ವೋಟರ್‌ ಐಡಿ ಪಡ್ಕೊಂಡ್ರೆ ಮುಲಾಜಿಲ್ಲದೆ ಕ್ರಮ ಕೈಗೊಳ್ತೀವಿ’; ಚುನಾವಣಾಧಿಕಾರಿ ಎಚ್ಚರಿಕೆ

ಅಕ್ರಮದ ಕುರಿತು ರಾಜ್ಯ ಸರಕಾರ ಸಿಐಡಿ ವಿಚಾರಣೆಗೆ ಕಳುಹಿಸಿದ್ದ ವೇಳೆ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ ಅವರು ಸೂಕ್ತ ತನಿಖೆ ನಡೆಸಿಲ್ಲ. ಐಎಂಎ ಕಂಪನಿ ವ್ಯವಹಾರಗಳು ಕೆಪಿಐಡಿ ಕಾಯಿದೆಯ ಉಲ್ಲಂಘನೆಯಾಗುವುದಿಲ್ಲ ಎಂದು ವರದಿ ನೀಡಿದ್ದರು. ಲಂಚ ಪಡೆದು ಐಎಂಎ ಕಂಪನಿಗಳ ಅವ್ಯವಹಾರಗಳು ಮುಂದುವರಿಯಲು ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ. ಕಳೆದ ವಾರ ಆರೋಪ ಹೊತ್ತ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಿಬಿಐನಿಂದ ಆರೋಪಪಟ್ಟಿ ಸಲ್ಲಿಕೆಯಾಗಿದೆ.

ಪೌರಾಡಳಿತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿದ ಮೀಸಲಿಗೆ ಹೈಕೋರ್ಟ್‌ ತಡೆ..!

ಐಪಿಎಸ್‌ ಅಧಿಕಾರಿಗಳ ವಿರುದ್ಧ ಕ್ರಮ ಬಾಕಿ:
ಇದೇ ಪ್ರಕರಣದಲ್ಲಿಐಪಿಎಸ್‌ ಅಧಿಕಾರಿಗಳಾದ ಬೆಂಗಳೂರು ನಗರ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಮತ್ತು ಕೆಎಸ್‌ಆರ್‌ಪಿ ಡಿಸಿಪಿ ಅಜಯ್‌ ಹಿಲೋರಿ ಅವರ ವಿರುದ್ಧವೂ ಆರೋಪಪಟ್ಟಿ ಸಲ್ಲಿಸಲಾಗಿದೆ. ಆದರೆ, ಸರಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಕೆಲ ದಿನಗಳಲ್ಲಿ ಈ ಇಬ್ಬರು ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಕುರಿತು ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ