ಆ್ಯಪ್ನಗರ

ಕೇಬಲ್‌ಗಳೆಲ್ಲವನ್ನೂ ಅಂಡರ್‌ಗ್ರೌಂಡ್‌ ಹಾಕಲು ಯೋಜನೆ: ಡಿಸಿಎಂ

ಮರ ಬಿದ್ದಾಗ ಹೆಚ್ಚಾಗಿ ಸಮಸ್ಯೆ ಆಗುವುದು ಕೇಬಲ್‌ಗಳು ಕಡಿತವಾಗುವುದು. ಇನ್ನು ಎರಡು ತಿಂಗಳಲ್ಲಿ ಎಲ್ಲ ಕೇಬಲ್‌ಗಳ ಲೈನ್‌ಗಳನ್ನು ನೆಲದಡಿಯಲ್ಲಿ ಎಳೆಯುವ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ.

Vijaya Karnataka Web 27 May 2019, 12:12 pm
ಬೆಂಗಳೂರು: ಗಾಳಿ ಮಳೆ ಸಂದರ್ಭದಲ್ಲಿ ಮರ ಉರುಳಿ, ಕೇಬಲ್‌, ವಿದ್ಯುತ್‌ ತಂತಿ ತುಂಡಾಗುವ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ, ಇನ್ನು 2 ತಿಂಗಳಲ್ಲಿ ಎಲ್ಲ ಕೇಬಲ್‌ಗಳನ್ನು ನೆಲದಡಿಯಲ್ಲಿ ಹಾಕುವ ಯೋಜನೆ ಕೈಗೊಳ್ಳಲು ಚಿಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.
Vijaya Karnataka Web Param_2.


ಅವರು ಸೋಮವಾರ ಮಳೆಹಾನಿ ಪ್ರದೇಶಗಳಾದ ವಿಜಯನಗರ, ಮಲ್ಲೇಶ್ವರ, ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಗೆ ಭೇಟಿ ನೀಡಿ ಮಳೆಯಿಂದ ಆದ ಅನಾಹುತದ ಕುರಿತು ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಮರ ಬಿದ್ದಾಗ ಹೆಚ್ಚಾಗಿ ಸಮಸ್ಯೆ ಆಗುವುದು ಕೇಬಲ್‌ಗಳು ಕಡಿತವಾಗುವುದು. ಇನ್ನು ಎರಡು ತಿಂಗಳಲ್ಲಿ ಎಲ್ಲ ಕೇಬಲ್‌ಗಳ ಲೈನ್‌ಗಳನ್ನು ನೆಲದಡಿಯಲ್ಲಿ ಎಳೆಯುವ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಕಳೆದ ಎರಡು ದಿನದಿಂದ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, 500 ಕ್ಕೂ ಹೆಚ್ಚು ಮರಗಳು ಹಾನಿಯಾಗಿದೆ. 100 ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದೆ. ರಾಜ್ಯದ ಕೆಲವೆಡೆ 120 ಮೀ.ಮೀ ಗೂ ಅಧಿಕ ಮಳೆಯಾಗಿದೆ. ಬಿರುಗಾಳಿ ಇದ್ದ ಕಾರಣ ಹೆಚ್ಚು ಮರ ನೆಲಕ್ಕುರುಳಿದೆ. ಮರಗಳ ತೆರವು, ವಿದ್ಯುತ್‌ ಲೈನ್‌ ಸರಿಪಡಿಸುವುದು ಸೇರಿ ಇತರೆ ಮಳೆ ಹಾನಿ ಸರಿಪಡಿಸಲು ಬಿಬಿಎಂಪಿ, ಬೆಸ್ಕಾಂ ಸೇರಿ ಇತರೆ ಇಲಾಖೆಗಳ 61 ತಂಡಗಳು ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಮುಂಗಾರು ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಪಾಲಿಕೆ ಈಗಾಗಲೇ ಮುಂಗಾರು ಮಳೆ ವೇಳೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿದೆ. ಈ ಸಂಬಂಧ ಪೂರ್ವಭಾವಿಯಾಗಿ ಮೆನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದ್ದೆ. ಹೀಗಾಗಿ ಮಳೆಯಾದರೂ ತಗ್ಗು ಪ್ರದೇಶದಲ್ಲಿ ಪ್ರವಾಹದಂಥ ಪರಿಸ್ಥಿತಿ ಎದುರಾಗಿಲ್ಲ. ಗಾಳಿ ಮಳೆಯಿಂದ ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಿ, ವಿದ್ಯುತ್‌ ಸಂಪರ್ಕ ಹಾಗೂ ಕೇಬಲ್‌ ಸಂಪರ್ಕಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮೇಯರ್‌ ಗಂಗಾಬಿಕ, ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ಎಂ. ಕೃಷ್ಣಪ್ಪ , ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ