ಆ್ಯಪ್ನಗರ

ಒಟ್ಟಿಗೆ ಮದ್ಯ ಸೇವಿಸಿ ನಶೆ ಬಂದ ಬಳಿಕ ಟೆಕ್ಕಿ ಮೇಲೆ ಅತ್ಯಾಚಾರ; ನೈಜೀರಿಯಾ ಪ್ರಜೆಗಳಿಬ್ಬರ ಬಂಧನ

ಮೂವರು ಒಟ್ಟಿಗೆ ಕುಳಿತು ಮದ್ಯ ಸೇವಿಸಿದ್ದಾರೆ. ಮದ್ಯ ಸೇವಿಸಿದ ಬಳಿಕ ತನಗೆ ನಶೆ ಬಂದಿದ್ದು, ಈ ವೇಳೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ಪ್ರಜ್ಞೆ ಬಂದ ಬಳಿಕ ನೋಡಿದಾಗ ತನ್ನ ಜತೆ ಉಬಾಕ ಬೆತ್ತಲೆಯಾಗಿದ್ದ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ. ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ, ಜೈಲಿಗಟ್ಟಲಾಗಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದರು.

Vijaya Karnataka 4 Sep 2021, 8:00 am
ಬೆಂಗಳೂರು: ಮದ್ಯ ಕುಡಿಸಿ ನಶೆ ಬಂದ ಬಳಿಕ ನೈಜೀರಿಯಾ ಪ್ರಜೆಗಳಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಟೆಕ್ಕಿಯೊಬ್ಬರು ಬಾಣಸವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web Crime News


ಬಾಣಸವಾಡಿ ನಿವಾಸಿ ಟೋನಿ(35) ಹಾಗೂ ಉಬಾಕಾ(36) ಬಂಧಿತ ಆರೋಪಿಗಳಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ತಿಳಿಸಿದ್ದಾರೆ. ಯುವತಿ ಮೂಲತಃ ಕಲ್ಬುರ್ಗಿ ಜಿಲ್ಲೆಯವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದಾರೆ. ಯುವತಿಗೆ ಹಲವು ವರ್ಷಗಳಿಂದ ನೈಜೀರಿಯಾ ಪ್ರಜೆ ಟೋನಿ ಪರಿಚಯಸ್ಥನಾಗಿದ್ದ. ಉಬಾಕಾ ಹಲವು ಬಾರಿ ಯುವತಿಯನ್ನು ಪರಿಚಯ ಮಾಡಿಕೊಳ್ಳಲು ಯತ್ನಿಸಿದ್ದ. ಆ.29ರಂದು ಟೋನಿ ಸಂತ್ರಸ್ತೆಯನ್ನು ಸ್ನೇಹಿತರೊಬ್ಬರ ಮನೆಗೆ ಹೋಗೋಣ ಎಂದು ಉಬಾಕಾ ಮನೆಗೆ ಕರೆದುಕೊಂಡು ಹೋಗಿದ್ದ.
ರಾಜ್ಯದಲ್ಲಿ ಹೆಚ್ಚುತ್ತಿದೆ ಅತ್ಯಾಚಾರ ಕೇಸ್‌; ತಿಂಗಳಿಗೆ ಸರಾಸರಿ 44 ರೇಪ್‌! ಶಿಕ್ಷೆಗಿಂತ ಖುಲಾಸೆಯೇ ಹೆಚ್ಚು!
ಈ ವೇಳೆ ಉಬಾಕಾನನ್ನು ನೋಡಿದ ಸಂತ್ರಸ್ತೆ ಟೋನಿ ಮೇಲೆ ಸಿಟ್ಟಾಗಿದ್ದರು. ಬಳಿಕ ಟೋನಿ, ಯುವತಿಯನ್ನು ಸಮಾಧಾನಪಡಿಸಿದ್ದ. ನಂತರ ಮೂವರು ಒಟ್ಟಿಗೆ ಕುಳಿತು ಮದ್ಯ ಸೇವಿಸಿದ್ದಾರೆ. ಮದ್ಯ ಸೇವಿಸಿದ ಬಳಿಕ ತನಗೆ ನಶೆ ಬಂದಿದ್ದು, ಈ ವೇಳೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ಪ್ರಜ್ಞೆ ಬಂದ ಬಳಿಕ ನೋಡಿದಾಗ ತನ್ನ ಜತೆ ಉಬಾಕ ಬೆತ್ತಲೆಯಾಗಿದ್ದ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ. ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ, ಜೈಲಿಗಟ್ಟಲಾಗಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದರು.

ಯುವತಿಗೆ ಹಲವು ಮಂದಿ ಆಫ್ರಿಕಾ ಪ್ರಜೆಗಳು ಸ್ನೇಹಿತರಿದ್ದಾರೆ ಎಂಬುದು ಗೊತ್ತಾಗಿದೆ. ಆಕೆಯ ಮೊಬೈಲ್‌ನಲ್ಲಿ ಹಲವು ನಂಬರ್‌ಗಳು ಪತ್ತೆಯಾಗಿವೆ. ಆಫ್ರಿಕಾ ಪ್ರಜೆಗಳ ಜತೆ ಮಾದಕ ದಂಧೆ ನಂಟು ಹೊಂದಿದ್ದಾಳೆಯೇ ಅಥವಾ ಇನ್ನಿತರ ವ್ಯವಹಾರ ಹೊಂದಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದರು.
ಕಾಂಡೋಮ್‌ ಸಿಕ್ಕಿದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಪರ್ಕ ಎನ್ನಲು ಸಾಧ್ಯವಿಲ್ಲ; ನ್ಯಾಯಾಲಯ
ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೆಲದಿನಗಳ ಹಿಂದಷ್ಟೇ ಮೈಸೂರಿನಲ್ಲಿ ಹೊರ ರಾಜ್ಯದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ತಮಿಳುನಾಡು ಮೂಲದ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದ್ದು, ಮಹಿಳೆಯರು ಆತಂಕ ಪಡುವಂತೆ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ