ಆ್ಯಪ್ನಗರ

ಬೆಂಗಳೂರು ಕೆರೆಗಳ ಪರಿಶೀಲನೆ

ಯುನೈಟೆಡ್‌ ಬೆಂಗಳೂರು ದೂರು ಹಿನ್ನೆಲೆಯಲ್ಲಿ ಕ್ರಮ

Vijaya Karnataka Web 8 Aug 2018, 9:09 pm
ಬೆಂಗಳೂರು: ಬೆಂಗಳೂರಿನ ಕೆರೆ ಸಂರಕ್ಷಣೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ತಂಡ ಇಂದು ನಗರದ ಹಲವು ಕೆರೆಗಳ ಪರಿಶೀಲನೆ ನಡೆಸಿತು.
Vijaya Karnataka Web ಕೆರೆಗಳ ಪರಿಶೀಲನೆ
ಕೆರೆಗಳ ಪರಿಶೀಲನೆ


ಲೋಕಾಯುಕ್ತರ ಆದೇಶದಂತೆ ವೃಷಭಾವತಿ ಪರಿಶೀಲನೆ ನಡೆಸಲಾಯಿತು.

ಬೆಂಗಳೂರಿನ ಕೆರೆ ಸಂರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ಅವುಗಳ ರಕ್ಷಣೆಗೆ ಮುಂದಾಗಿರುವ ಯುನೈಟೆಡ್‌ ಬೆಂಗಳೂರು ಸಂಘಟನೆ ಇತ್ತೀಚಿಗೆ ಲೋಕಾಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿತ್ತು.

ಇದರ ಮೇರೆಗೆ ಲೋಕಾಯುಕ್ತರ ಆದೇಶದಂತೆ ಬಿಬಿಎಂಪಿ ಅಧಿಕಾರಿ ಬೆಟ್ಟೇಗೌಡ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಅನಿಲ್‌ ಕುಮಾರ್‌, ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಕೊಟ್ರೇಶ್‌, ಗಣಿ ಭೂ ವಿಜ್ಞಾನ ಇಲಾಖೆಯ ದಿಲೀಪ್‌ ಕುಮಾರ್‌, ಯುನೈಟೆಡ್‌ ಬೆಂಗಳೂರು ಸಂಘಟನೆಯ ಪದಾಧಿಕಾರಿಗಳು ಬುಧವಾರ ಪರಿಶೀಲನೆ ನಡೆಸಿದರು.


ಈ ಭಾಗದಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವುದು ಗಮನ ಬಂದಿದೆ. ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ