ಆ್ಯಪ್ನಗರ

ವ್ಯಾಪಾರಸ್ಥರ ಮೇಲೆ ದೌರ್ಜನ್ಯ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ವ್ಯಾಪಾರಸ್ಥರ ಮೇಲೆ ಬಿಬಿಎಂಪಿ ಅಧಿಕಾರಿಗಳು ನಡೆಸಿದ ದೌರ್ಜನ್ಯದ ವಿರುದ್ಧ ಇಂದು ರೈತರು ಹಾಗೂ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.

Vijaya Karnataka Web 6 Jun 2020, 2:17 pm
ಬೆಂಗಳೂರು: ಕೆ.ಆರ್‌.ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅನುವುಮಾಡಿಕೊಡುವಂತೆ ಹಾಗೂ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಮೇಲೆ ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೆಆರ್‌ ಮಾರುಕಟ್ಟೆ ಆವರಣದಲ್ಲಿ ಪ್ರತಿಭಟನೆ ನಡೆದಿದೆ.
Vijaya Karnataka Web BkKoTLpe


ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾರಿಗಳು, ರೈತರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸದರು. ಆವರಣದಲ್ಲಿ ಕುಳಿತು ಬಿಬಿಎಂಪಿ ವಿರುದ್ಧ ಘೋಷಣೆಗಳನ್ನ ಕೂಗಿ ಅಸಮಧಾನ ವ್ಯಕ್ತಪಡಿಸಿದರು. ಅಲ್ಲದೇ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನ ನೀಡಿದರು. ಎರಡು ದಿನದ ಹಿಂದೆ ರೈತರು ಹೂ, ಸೊಪ್ಪು ,ತರಕಾರಿ, ಜೋಳ ಕೃಷಿ ಉತ್ಪನ್ನಗಳನ್ನು ಕೆ.ಆರ್ ಮಾರುಕಟ್ಟೆಗೆ ತಂದು ಮಾರುವ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದರು ಎಂದು ವ್ಯಾಪಾರಸ್ಥರು ಹಾಗೂ ರೈತರು ಆರೋಪಿಸಿದ್ದರು. ಅಲ್ಲದೇ ಬಿಬಿಎಂಪಿ ಅಧಿಕಾರಿಗಳು ತಮ್ಮ ವಸ್ತುಗಳನ್ನೆಲ್ಲ ದರ್ಪದಿಂದ ಎಸೆದಿದ್ದಾಗಿಯೂ ಆರೋಪಿಸಿದ್ದರು.

ಪರಸ್ಪರ ಸಾಮಾಜಿಕ ಅಂತರವಿರಲಿಲ್ಲ!
ಇನ್ನು ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಆದರೆ ಪ್ರತಿಭಟನೆ ವೇಳೆ ಈ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಲಾಗಿತ್ತು. ಸಾಮಾಜಿಕ ಅಂತರ ಇರಲಿಲ್ಲ. ಅಲ್ಲದೇ ಮಾಸ್ಕ್‌ಗಳನ್ನ ಮುಖದಿಂದ ತೆಗೆದಿದ್ದರು.

ಹಿರಿಯ ಬಿಜೆಪಿ ನಾಯಕಿ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ತಾಯಿ ನಿಧನ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ