ಆ್ಯಪ್ನಗರ

ನಿರೀಕ್ಷಣಾ ಜಾಮೀನು ಕೋರಿ ತಾತಾ ಅರ್ಜಿ

ಬಂಧನ ಭೀತಿಯಿಂದ ವಿಜಯ್‌ ತಾತಾ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Vijaya Karnataka 15 Dec 2018, 5:00 am
ಬಂಧನ ಭೀತಿಯಿಂದ ವಿಜಯ್‌ ತಾತಾ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಡಿ.13 ರಂದು 61ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರೆ, ಅದೇ ದಿನ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಡಿ.14 ರಂದು ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಸಿಸಿಬಿ ಅಧಿಕಾರಿಗಳು ಡಿ.14ರಂದೇ ಆಕ್ಷೇಪಣೆ ಕೂಡ ಸಲ್ಲಿಸಿಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿದೆ. ಅದೇ ರೀತಿ ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಕೆಪಿಐಡಿ ಕಾಯಿದೆ ಅಡಿ ಕೇಸು ದಾಖಲಿಸಿದ್ದರಿಂದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ ಡಿ.12 ರಂದೇ ನ್ಯಾಯಾಲಯ ತೀರ್ಪು ನೀಡಿತ್ತು. ಆದರೂ ಡಿ.13ರಂದು 61ನೇ ಸಿಸಿಎಚ್‌ ನ್ಯಾಯಾಲಯದಲ್ಲೇ ಜಾಮೀನು ಕೋರಿ ವಿಜಯ್‌ ತಾತಾ ಅರ್ಜಿ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Vijaya Karnataka Web vijay tata applied for anticipatory bail
ನಿರೀಕ್ಷಣಾ ಜಾಮೀನು ಕೋರಿ ತಾತಾ ಅರ್ಜಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ