ಆ್ಯಪ್ನಗರ

ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರಿನಲ್ಲಿ 7 ದಿನದಲ್ಲಿ 3.63 ಕೋಟಿ ರೂ.‌ ದಂಡ ವಸೂಲಿ!

ಸಂಚಾರ ನಿಯಮ ಉಲ್ಲಂಘಿಸುತ್ತಿರುವ ಸವಾರರ ವಿರುದ್ಧ ನಗರ ಟ್ರಾಫಿಕ್‌ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಕೇವಲ ಏಳು ದಿನಗಳಲ್ಲಿ 3.63 ಕೋಟಿ ದಂಡ ಸಂಗ್ರಹಿಸಿದ್ದಾರೆ. ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಂಚಾರ ಪೊಲೀಸರು ದಂಡ ವಸೂಲಿ ಮಾಡುತ್ತಿದ್ದಾರೆ. ಪೊಲೀಸರಿಲ್ಲ ಎಂದು ನಿಯಮ ಉಲ್ಲಂಘಿಸುವವರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.

Vijaya Karnataka Web 28 Oct 2020, 6:36 am
ಬೆಂಗಳೂರು: ನಗರದ ಗಲ್ಲಿ ಗಲ್ಲಿಗಳಲ್ಲಿ ಸಂಚಾರ ಪೊಲೀಸರು ನಿಂತು ವಾಹನ ಸವಾರರ ದಾಖಲೆ ತಪಾಸಣೆ ಮಾಡುವುದರ ಜತೆಗೆ ನಿಯಮ ಉಲ್ಲಂಘಿಸುತ್ತಿರುವವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ. ಅ.19 ರಿಂದ 25ರವರೆಗೆ ಕೇವಲ ಏಳು ದಿನದಲ್ಲಿ 86,380 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದು, ಕೇವಲ ಏಳು ದಿನದಲ್ಲಿ ಒಟ್ಟು 3.63 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ.
Vijaya Karnataka Web traffic violation


ಎಷ್ಟೇ ಎಚ್ಚರಿಕೆ ನೀಡಿದ್ದರೂ ಟ್ರಾಫಿಕ್‌ ನಿಯಮ ಉಲ್ಲಂಘನೆ ಮುಂದುವರಿದಿದೆ. ಇದರಲ್ಲಿ ನೋ ಪಾರ್ಕಿಂಗ್‌, ಸಿಗ್ನಲ್‌ ಜಂಪ್‌ ಹಾಗೂ ಹೆಲ್ಮೆಟ್‌ ಧರಿಸದೆ ಸಂಚರಿಸುವ ಕೇಸುಗಳ ಸಂಖ್ಯೆ ಹೆಚ್ಚಿದೆ. ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಂಚಾರ ಪೊಲೀಸರು ದಂಡ ವಸೂಲಿ ಮಾಡುತ್ತಿದ್ದಾರೆ. ಪೊಲೀಸರಿಲ್ಲ ಎಂದು ನಿಯಮ ಉಲ್ಲಂಘಿಸುವವರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.
ಮೋಟಾರು ಕಾಯ್ದೆ ಉಲ್ಲಂಘನೆ: ದ.ಕ. ದಲ್ಲಿ 4.31 ಕೋಟಿ ರೂ. ದಂಡ ಸಂಗ್ರಹ

ಇದರಲ್ಲಿ ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿರುವ ಬಗ್ಗೆ 28,201 ಪ್ರಕರಣ ದಾಖಲಾಗಿದ್ದು, 1.02 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರ ಹೆಲ್ಮೆಟ್‌ ಧರಿಸದಿರುವ ಬಗ್ಗೆ 17,105 ಪ್ರಕರಣಗಳು ದಾಖಲಾಗಿದ್ದು, 62.38 ಲಕ್ಷ ರೂ. ಸಂಗ್ರಹವಾಗಿದೆ. ಕಾರುಗಳಲ್ಲಿ ಸೀಟ್‌ ಬೆಲ್ಟ್‌ ಧರಿಸದ 4,827 ಪ್ರಕರಣಗಳು ದಾಖಲಾಗಿದ್ದು, 22.92 ಲಕ್ಷ ರೂ. ದಂಡ ಸಂಗ್ರಹ ಹಾಗೂ ನಿಷೇಧಿತ ರಸ್ತೆಗಳಲ್ಲಿ ಸಂಚಾರ ಮಾಡಿರುವ 3,790 ಪ್ರಕರಣಗಳಿಂದ 14.45 ಲಕ್ಷ ರೂ. ಮತ್ತು ಸಂಚಾರ ಸಮಯದಲ್ಲಿ ಮೊಬೈಲ್‌ ಬಳಕೆ ಮಾಡಿರುವ 2,448 ಪ್ರಕರಣಗಳಿಂದ 16.83 ಲಕ್ಷ ರೂ. ಸಂಗ್ರಹಿಸಲಾಗಿದೆ.
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ್ರೆ ಮನೆ ಬಾಗಿಲಿಗೆ ಬರ್ತಾರೆ ಪೊಲೀಸರು!

ದೋಷಪೂರಿತ ನಂಬರ್‌ ಪ್ಲೇಟ್‌ ಹಾಗೂ ತ್ರಿಬಲ್‌ ರೈಡಿಂಗ್‌, ನೋ ಪಾರ್ಕಿಂಗ್‌, ಓವರ್‌ ಸ್ಪೀಡ್‌, ಉದ್ದದ ವಸ್ತುಗಳ ಸಾಗಟ ಸೇರಿದಂತೆ ನಾನಾ ರೀತಿಯ ಸಂಚಾರ ನಿಯಮ ಉಲ್ಲಂಘಿಸಿರುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ