ಆ್ಯಪ್ನಗರ

​ಲೋಕಾಯಕ್ತಕ್ಕೆ ಶೆಟ್ಟಿ, ಪಾಟೀಲ್‌, ರೆಡ್ಡಿ ಹೆಸರು ಪ್ರಸ್ತಾಪ: ಸಿಎಂ

ಲೋಕಾಯುಕ್ತ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಗಳಾದ ವಿಶ್ವನಾಥ ಶೆಟ್ಟಿ, ಎನ್.ಕೆ. ಪಾಟೀಲ್ ಮತ್ತು ಬೈರಾರೆಡ್ಡಿ ಅವರ ಹೆಸರುಗಳು ಇಂದಿನ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಕ ಸುದ್ದಿಲೋಕ 9 Jan 2017, 4:25 pm
ಬೆಂಗಳೂರು: ಲೋಕಾಯುಕ್ತ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಗಳಾದ ವಿಶ್ವನಾಥ ಶೆಟ್ಟಿ, ಎನ್.ಕೆ. ಪಾಟೀಲ್ ಮತ್ತು ಬೈರಾರೆಡ್ಡಿ ಅವರ ಹೆಸರುಗಳು ಇಂದಿನ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Vijaya Karnataka Web vishwanathashettys name in lokayukta proposal
​ಲೋಕಾಯಕ್ತಕ್ಕೆ ಶೆಟ್ಟಿ, ಪಾಟೀಲ್‌, ರೆಡ್ಡಿ ಹೆಸರು ಪ್ರಸ್ತಾಪ: ಸಿಎಂ


ಲೋಕಾಯುಕ್ತರ ನೇಮಕ ಸಂಬಂಧ ಕುಮಾರಕೃಪಾ ಅತಿಥಿ ಗೃಹದಲ್ಲಿ ಕರೆದಿದ್ದ ಸಭೆ ಬಳಿಕ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು.
ಈ ಮೂರು ಹೆಸರುಗಳಿಗೂ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು ಒಪ್ಪಿಗೆ ಸೂಚಿಸಿದ್ದಾರೆ. ಒಬ್ಬರ ಹೆಸರನ್ನು ಲೋಕಾಯುಕ್ತ ಹುದ್ದೆಗಾಗಿ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಕಾವೇರಿ ನದಿ ನೀರು ಬಿಡುಗಡೆ ಮಾಡದ ಪರಿಣಾಮ ಆಗಿರುವ ನಷ್ಟಕ್ಕೆ ಪರಿಹಾರ ನೀಡುವಂತೆ ತಮಿಳುನಾಡು ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿದೆ. ಈ ಹಿಂದೆಯೂ ಮನವಿ ಸಲ್ಲಿಸಲಾಗಿತ್ತು. ಈ ಕುರಿತು ನಮ್ಮ ವಕೀಲರು ಗಮನ ಹರಿಸಲಿದ್ದಾರೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ಕುಟುಂಬದವರು ಮತ್ತು ಬೆಂಬಲಿಗರು ಯುವಕನ ಮೇಲೆ ನಡೆಸಿರುವ ದೌರ್ಜನ್ಯ ಸಂಬಂಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. ಶಾಸಕರಾಗಲಿ, ಸಂಸದರಾಗಲಿ, ಯಾರೇ ಆದರೂ ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ