ಆ್ಯಪ್ನಗರ

ವೈಟ್‌ಟಾಪಿಂಗ್‌ ಕಾಮಗಾರಿ: ವಾಹನ ಮಾರ್ಗ ಬದಲಾವಣೆ

ಬಿಬಿಎಂಪಿಯು ನಗರದ ಹೊರವರ್ತುಲ ರಸ್ತೆಯಲ್ಲಿ ಆ.27ರಿಂದ ವೈಟ್‌ಟಾಪಿಂಗ್‌ ಕಾಮಗಾರಿ ಕೈಗೊಳ್ಳುತ್ತಿದೆ. ಹೀಗಾಗಿ, ಸಂಚಾರಕ್ಕೆ ಬದಲಿ ಮಾರ್ಗ ಬಳಸುವಂತೆ ವಾಹನ ಸವಾರರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

Vijaya Karnataka 21 Aug 2018, 11:54 am
ಬೆಂಗಳೂರು: ಬಿಬಿಎಂಪಿಯು ನಗರದ ಹೊರವರ್ತುಲ ರಸ್ತೆಯಲ್ಲಿ ಆ.27ರಿಂದ ವೈಟ್‌ಟಾಪಿಂಗ್‌ ಕಾಮಗಾರಿ ಕೈಗೊಳ್ಳುತ್ತಿದೆ. ಹೀಗಾಗಿ, ಸಂಚಾರಕ್ಕೆ ಬದಲಿ ಮಾರ್ಗ ಬಳಸುವಂತೆ ವಾಹನ ಸವಾರರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
Vijaya Karnataka Web white


ಹೆಬ್ಬಾಳ ಮೇಲ್ಸೇತುವೆ ಜಂಕ್ಷನ್‌ನಿಂದ ಹೆಣ್ಣೂರು ರಸ್ತೆಯವರೆಗೆ ಎಡಬದಿಯ ಒಂದು ಮಾರ್ಗದಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ಆರಂಭವಾಗಲಿವೆ. ಹೀಗಾಗಿ, ಈ ಎಡ ಬದಿಯ ರಸ್ತೆಯಲ್ಲಿ ನ. 11ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಆದ ಕಾರಣ, ಹೆಬ್ಬಾಳ ಮೇಲ್ಸೇತುವೆಯಿಂದ ಹೆಣ್ಣೂರು ರಸ್ತೆಯ ಜಂಕ್ಷನ್‌ ಕಡೆಗೆ ತೆರಳುವ ವಾಹನ ಸವಾರರು ಸವೀರ್‍ಸ್‌ ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.

ಹಾಗೆಯೇ, ಸುಮನಹಳ್ಳಿ ಮೇಲ್ಸೇತುವೆ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗೆ ಎಡ ಬದಿಯ ರಸ್ತೆಗೆ ವೈಟ್‌ಟಾಪಿಂಗ್‌ ಮಾಡಲಾಗುತ್ತಿದ್ದು, ಆ. 27 ರಿಂದ ಸೆ. 26ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸುಮನಹಳ್ಳಿ ಕಡೆಯಿಂದ ನಾಯಂಡಹಳ್ಳಿ ಕಡೆ ಸಂಚರಿಸುವವರು ಸವೀರ್‍ಸ್‌ ರಸ್ತೆಯಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ