ಆ್ಯಪ್ನಗರ

ಭಯೋತ್ಪಾದನೆ ವಿರುದ್ಧ ಇಡೀ ವಿಶ್ವ ಒಂದಾಗಿ ಹೋರಾಡಬೇಕು: ವೆಂಕಯ್ಯನಾಯ್ಡು

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅವರು, ಶ್ರೀಲಂಕಾದ ಸರ್ಕಾರ ಮತ್ತು ಅಲ್ಲಿನ ಜನರೊಂದಿಗೆ ಭಾರತ ಸದಾ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Vijaya Karnataka Web 22 Apr 2019, 9:18 pm
ಬೆಂಗಳೂರು: ಭಯೋತ್ಪಾದನೆಯ ಬೆದರಿಕೆಯ ವಿರುದ್ಧ ಇಡೀ ಜಗತ್ತು ಒಗ್ಗೂಡಿ ಹೋರಾಡಲು ಇದು ಸೂಕ್ತ ಸಮಯ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ಹೇಳಿದ್ದಾರೆ.
Vijaya Karnataka Web ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು


ಬೆಂಗಳೂರು ವಿಶ್ವವಿದ್ಯಾಲಯದ 54ನೆ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಯೋತ್ಪಾದನೆಯನ್ನು ಮಟ್ಟ ಹಾಕುವ ಜೊತೆಗೆ ಭಯೋತ್ಪಾದಕರಿಗೆ ಪ್ರೋತ್ಸಾಹ ನೀಡುತ್ತಿರುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಭಯೋತ್ಪಾದನೆಯನ್ನು ನಿಗ್ರಹ ಮಾಡಲು ಕಠಿಣ ಕ್ರಮ ಕೈಗೊಳ್ಳದಿದ್ದರೆ ಜಗತ್ತಿನಲ್ಲಿ ಶಾಂತಿ, ಅಭಿವೃದ್ಧಿ ಕಷ್ಟಸಾಧ್ಯ ಎಂದರು..

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅವರು, ಶ್ರೀಲಂಕಾದ ಸರ್ಕಾರ ಮತ್ತು ಅಲ್ಲಿನ ಜನರೊಂದಿಗೆ ಭಾರತ ಸದಾ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಯುವಜನರಲ್ಲಿ ಉದ್ಯೋಗಕ್ಕಷ್ಟೇ ಮೀಸಲಾಗದೆ, ಜ್ಞಾನದ ಭಂಡಾರವಾಗುವ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಾಗಲಿ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ