ಆ್ಯಪ್ನಗರ

ನುಡಿದಂತೆ ನಡೆಯುತ್ತೇನೆ, ನಿಮ್ಮ ಗೌರವ ರಕ್ಷಿಸುತ್ತೇನೆ: ಕುಸುಮಾ

2015ರಲ್ಲಿ ನನ್ನ ಅಸಹಾಯಕ ಸ್ಥಿತಿಯನ್ನು ಇಡೀ ದೇಶ ನೋಡಿತ್ತು. ಇಂದು ಎಲ್ಲ ಮಹಿಳೆಯರು ನನ್ನ ಶಕ್ತಿಯಾಗಿ ನಿಂತಿದ್ದಾರೆ. ನಿಮ್ಮ ಪ್ರೀತಿ ಕಂಡು ಹೆಮ್ಮೆಯಾಗುತ್ತಿದೆ. ನೀವು ನನ್ನ ಶಕ್ತಿಯಾಗಿರುವಾಗ ನಾನು ಕುಗ್ಗುವುದಿಲ್ಲ. ಸಧೃಢವಾಗಿ ನಿಲ್ಲುತ್ತೇನೆ.

Vijaya Karnataka Web 28 Oct 2020, 9:02 pm
ಬೆಂಗಳೂರು: 'ನಾನು ನಿಮ್ಮ ಕಷ್ಟ ಕೇಳಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ನಿಷ್ಠೆಯಿಂದ ಪ್ರಯತ್ನ ಮಾಡುವ ಭರವಸೆ ನೀಡುತ್ತೇನೆ. ನಾನು ಕೇವಲ ಭರವಸೆ ನೀಡುವುದಿಲ್ಲ, ನುಡಿದಂತೆ ನಡೆಯುತ್ತೇನೆ. ನಿಮ್ಮ ಗೌರವವನ್ನು ರಕ್ಷಿಸುತ್ತೇನೆ' ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ತಿಳಿಸಿದ್ದಾರೆ.
Vijaya Karnataka Web ಕುಸುಮಾ
ಕುಸುಮಾ


ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಅವರ ಜತೆಗೂಡಿ ಕುಸುಮಾ ಅವರು ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು.

'ನಿಮ್ಮ ಕಷ್ಟ ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ ಅಂತಾ ನಿಮ್ಮ ಮುಂದೆ ಬಂದು ನಿಂತಿದ್ದೀನಿ. ನಿಮ್ಮ ನಿರೀಕ್ಷೆಯನ್ನು ನಾನು ಹುಸಿ ಮಾಡುವುದಿಲ್ಲ. ನಿಮ್ಮ ಮನೆ ಮಗಳಿಗೆ ನೀವು ಹೇಗೆ ಪ್ರೋತ್ಸಾಹ ನೀಡುತ್ತೀರೋ ಅದೇ ರೀತಿ ನನಗೂ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿ.

ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಯೋಜನೆ, ಕನಸುಗಳನ್ನು ಕಟ್ಟಿಕೊಂಡಿದ್ದೇನೆ. ಇದು ಸಾಕಾರಗೊಳ್ಳಲು ನಿಮ್ಮ ಬೆಂಬಲ ಅಗತ್ಯ. ನವೆಂಬರ್ 3ರಂದು ನಡೆಯಲಿರುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 1 ಹಸ್ತದ ಗುರುತಿಗೆ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸಿ ಎಂದರು ಮನವಿ ಮಾಡಿದರು.

ಕಣ್ಣೀರಾದ ಕುಸುಮಾ

ರಾಜರಾಜೇಶ್ವರಿ ನಗರದಲ್ಲಿ ನಡೆದ ಮಂಗಳಮುಖಿಯರ ಸಭೆಯಲ್ಲಿ ಮಾತನಾಡಿದ ಕುಸುಮಾ ಅವರು ಭಾವುಕರಾದರು.

ನಾನು ಪ್ರಚಾರಕ್ಕೆ ಹೋದಕಡೆಯೆಲ್ಲಾ ಮಹಿಳೆಯರು ಅರಿಶಿನ ಕುಂಕುಮ ಇಟ್ಟು, ಅವರೇ ಹೂ ಮೂಡಿಸಿ ಆಶೀರ್ವದಿಸುತ್ತಿದ್ದಾರೆ. 2015ರಲ್ಲಿ ನನ್ನ ಅಸಹಾಯಕ ಸ್ಥಿತಿಯನ್ನು ಇಡೀ ದೇಶ ನೋಡಿತ್ತು. ಇಂದು ಎಲ್ಲ ಮಹಿಳೆಯರು ನನ್ನ ಶಕ್ತಿಯಾಗಿ ನಿಂತಿದ್ದಾರೆ. ನಿಮ್ಮ ಪ್ರೀತಿ ಕಂಡು ಹೆಮ್ಮೆಯಾಗುತ್ತಿದೆ. ನೀವು ನನ್ನ ಶಕ್ತಿಯಾಗಿರುವಾಗ ನಾನು ಕುಗ್ಗುವುದಿಲ್ಲ. ಸಧೃಢವಾಗಿ ನಿಲ್ಲುತ್ತೇನೆ ಎಂದು ಹೇಳಿದರು.

ನಾವು ಮನುಷ್ಯರನ್ನು ಮನುಷ್ಯರನ್ನಾಗಿ ನೋಡೋಣ. ಲಿಂಗದಿಂದ ತಾರತಮ್ಯ ಮಾಡುವುದು ಬೇಡ ಎಲ್ಲರನ್ನೂ ಗೌರವದಿಂದ ನೋಡೋಣ. ನಾನು ನಿಮ್ಮ ಗೌರವ ರಕ್ಷಿಸುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸ್ವೀಕರಿಸಿ, ನಿಮ್ಮ ಹೋರಾಟದಲ್ಲಿ ನಾನು ಭಾಗಿಯಾಗಿರುತ್ತೇನೆ ಎಂದು ಕುಸುಮಾ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ